HomeUncategorizedಎಲ್ಲವನ್ನೂ 2 ನಿಮಿಷದ ನೂಡಲ್ಸ್‌ನಂತೆ ತೀರ್ಮಾನಿಸಲು ಅಸಾಧ್ಯ: ಜೆಎಂಎಂ & ಕಾಂಗ್ರೆಸ್ ವಿರುದ್ಧ ಆರ್‌ಜೆಡಿ ವಾಗ್ದಾಳಿ

ಎಲ್ಲವನ್ನೂ 2 ನಿಮಿಷದ ನೂಡಲ್ಸ್‌ನಂತೆ ತೀರ್ಮಾನಿಸಲು ಅಸಾಧ್ಯ: ಜೆಎಂಎಂ & ಕಾಂಗ್ರೆಸ್ ವಿರುದ್ಧ ಆರ್‌ಜೆಡಿ ವಾಗ್ದಾಳಿ

- Advertisement -
- Advertisement -

ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ತೀವ್ರಗೊಂಡಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿವೆ. ಇದೇ ವೇಳೆ ಆರ್‌ಜೆಡಿ ಮತ್ತು ಎಡಪಕ್ಷಗಳಿಗೆ 11 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ಈ ಘೋಷಣೆಗೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಸಭಾ ಸಂಸದ ಮನೋಜ್ ಝಾ ಈ ನಿರ್ಧಾರವನ್ನು ಟೀಕಿಸಿದ್ದು, “ಎರಡು ನಿಮಿಷಗಳ ನೂಡಲ್ಸ್” ನಂತೆ ಎಲ್ಲಾ ಆಯ್ಕೆಗಳನ್ನು ತ್ವರಿತವಾಗಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಎಲ್ಲವನ್ನೂ 2 ನಿಮಿಷದ ನೂಡಲ್ಸ್‌ನಂತೆ

ಮುಖ್ಯಮಂತ್ರಿ ಹೇಮಂತ್ ಸೊರೆನ್, ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ಹೇಮಂತ್ ಸೊರೆನ್ ಅವರ ಸಂಪುಟದ ಹಿರಿಯ ಕ್ಯಾಬಿನೆಟ್ ಸಚಿವ ರಾಮೇಶ್ವರ್ ಓರಾನ್ ಶನಿವಾರ ಈ ಘೋಷಣೆ ಮಾಡಿದ್ದರು. “ಜೆಎಂಎಂ ಮತ್ತು ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಉಳಿದವುಗಳನ್ನು ಇಂಡಿಯಾ ಒಕ್ಕೂಟದ ಇತರ ಮೈತ್ರಿ ಪಕ್ಷಕ್ಕೆ ನೀಡಲಾಗುವುದು” ಎಂದು ಸೊರೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಆರ್‌ಜೆಡಿ ಸೀಟು ಹಂಚಿಕೆ ಸೂತ್ರದ ಬಗ್ಗೆ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ರಾಂಚಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ಝಾ, “ಕಾಂಗ್ರೆಸ್ ಮತ್ತು ಜೆಎಂಎಂ ಏಕಪಕ್ಷೀಯವಾಗಿ 70 ಸ್ಥಾನಗಳಲ್ಲಿ ಮೈತ್ರಿ ಘೋಷಿಸಿ, ನಮಗೆ ಕೆಲವೇ ಕೆಲವು ಸೀಟುಗಳನ್ನು ಮಾತ್ರ ನೀಡುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ 2 ನಿಮಿಷದ ನೂಡಲ್ಸ್‌ನಂತೆ

2019 ರಲ್ಲಿ, ನಮ್ಮ ಅಭ್ಯರ್ಥಿಗಳು ಐದು ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿ ಇದ್ದರು. ಇದು ಶೇಕಡಾವಾರು ಪ್ರಮಾಣದಲ್ಲಿ ಇತರ ಮೈತ್ರಿ ಪಕ್ಷಗಳ ಕಾರ್ಯಕ್ಷಮತೆಗಿಂತ ಉತ್ತಮವಾಗಿದೆ. ನಾವು 12 ಕ್ಷೇತ್ರಗಲ್ಲಿ ಏಕಾಂಗಿಯಾಗಿ ನಿಲ್ಲಲು ಪ್ರಾಬಲ್ಯ ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ನಿನ್ನೆಯಿಂದ, ನಮ್ಮ ನಾಯಕ ತೇಜಸ್ವಿ ಯಾದವ್ ರಾಂಚಿಯಲ್ಲಿ ಇಲ್ಲಿದ್ದಾರೆ. ಎಲ್ಲರೂ ಇಲ್ಲೇ ಇದ್ದರೂ ಮೈತ್ರಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ನಮ್ಮನ್ನು ತೊಡಗಿಸದೇ ಇರುವುದು ಬೇಸರವಾಗಿದೆ… ನಮ್ಮ ಬಲ ಬಹುಶಃ ತುಂಬಾ ಹೆಚ್ಚಿರುವುದರಿಂದ ನೋವೂ ಆಗಿದೆ.. ಅಂತಹ 15ರಿಂದ 18 ಸ್ಥಾನಗಳನ್ನು ನಾವು ಗುರುತಿಸಿದ್ದೇವೆ. ಇಲ್ಲಿ ಏಕಾಂಗಿಯಾಗಿಯೂ ಬಿಜೆಪಿಯನ್ನು ಸೋಲಿಸಲು ಸಮರ್ಥರಾಗಿದ್ದೇವೆ. ಎರಡು ನಿಮಿಷಗಳ ನೂಡಲ್ಸ್‌ನಂತೆ ಎಲ್ಲಾ ನಿರ್ಧಾರಗಳನ್ನು ತಕ್ಷಣವೇ ಮಾಡಲು ಸಾಧ್ಯವಿಲ್ಲ” ಎಂದು ಮನೋಜ್ ಝಾ ಹೇಳಿದ್ದಾರೆ.

ಈ ಘೋಷಣೆಗೆ ಆರ್‌ಜೆಡಿ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೆನ್ ಅವರು ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ

ಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...