Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...