Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...