Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...