Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...