Homeಮುಖಪುಟಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

- Advertisement -
- Advertisement -

ಜಮ್ಮು ವಿಮಾನ ನಿಲ್ಧಾಣದಲ್ಲಿ ಸ್ಪೋಟ ಸಂಭವಿಸಿದ 24 ಗಂಟೆಯೊಳಗೆ ಜಮ್ಮು ಸೇನಾನೆಲೆಯ ಬಳಿ ಎರಡು ಡ್ರೋಣ್‌ಗಳು ಕಾಣಿಸಿಕೊಂಡಿದ್ದು ಸೇನಾಪಡೆಗಳು ಡ್ರೋಣ್‌ಗಳತ್ತ ಗುಂಡು ಹಾರಿಸಿವೆ. ಗುಂಡಿನ ದಾಳಿಯಲ್ಲಿ ಸೇನಾಪಡೆಗಳು ಡ್ರೋನ್‌ಗಳನ್ನು ಹೊಡೆದುರಳಿಸಿವೆ ಎಂದು ಹೇಳಲಾಗುತ್ತಿದ್ದು, ಅಧಿಕೃತವಾದ ಮಾಹಿತಿ ತಿಳಿದುಬಂದಿಲ್ಲ.

ಶನಿವಾರ ಮಧ್ಯರಾತ್ರಿಯ ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿಯಾಗಿ 24 ಗಂಟೆ ಕಳೆಯುವ ಮುನ್ನ ಜಮ್ಮುವಿನ ಭಾರತೀಯ ಭೂಸೇನೆಯ ನೆಲೆಯ ಸಮೀಪ ಮತ್ತೊಮ್ಮೆ ಡ್ರೋಣ್‌ಗಳನ್ನು ಹಾರಿಬಿಡಲಾಗಿದೆ. ಭಾನುವಾರದ ದಾಳಿಯ ನಂತರ ತೀವ್ರ ಕಟ್ಟೆಚ್ಚರವಹಿಸಿದ್ದ ಸೇನಾ ಪಡೆಗಳು ಸಂಭವನೀಯ ದಾಳಿಯನ್ನು ಸೋಮವಾರ ಬೆಳಗಿನ ಜಾವ ತಡೆದಿದ್ದಾರೆ. ಇಂದು ಕಾಣಿಸಿಕೊಂಡ ಡ್ರೋಣ್‌ಗಳು ಸ್ಫೋಟಕಗಳನ್ನು ಹೊತ್ತಿದ್ದವೇ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ಯಾವ ಭಾಗದಿಂದ ಡ್ರೋಣ್‌ಗಳು ಹಾರಿ ಬಂದಿದ್ದವು ಎಂದು ಸೇನಾಪಡಗಳು ತನಿಖೆ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳ (NIA) ದ ಅಧಿಕಾರಿಗಳು  ಮತ್ತು ಬಾಂಬ್ ನಿಷ್ಕ್ರೀಯ ದಳದ ತಜ್ಞರು ಕೂಡ ಡ್ರೋಣ್‌ಗಳ ತನಿಖೆಯಲ್ಲಿ ತೊಡಗಿದ್ದಾರೆ.

“ಮತ್ತೊಮ್ಮೆ ಡ್ರೋನ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ಬಾರಿ ಉಗ್ರರು ಸೇನಾ ಶಿಬಿರವನ್ನ ಗುರಿಯಾಗಿಸಿಕೊಂಡಿದ್ದರು. ಜಮ್ಮು ಏರ್ ಫೋರ್ಸ್ ಸ್ಟೇಶನ್ ಮೇಲಿನ ಡ್ರೋನ್ ದಾಳಿ ಬಳಿಕ ಇಂದು ಮಿಲಿಟರಿ ಸ್ಟೇಶನ್ ಗುರಿ ಮಾಡಿಕೊಂಡಿದ್ದರು. ಕಡಿಮೆ ತೂಕದ ಸ್ಪೋಟಕಗಳನ್ನು ಹೊತ್ತಿದ್ದ ಡ್ರೋಣ್‌ಗಳಿವು ಎಂದು ಶಂಕಿಸಲಾಗಿದೆ. ಭಾರಿ ಪ್ರಮಾಣದ ಭಯೋತ್ಪಾದಕ ದಾಳಿಯನ್ನು ಕೂದಲೆಳೆಯ ಅಂತರದಲ್ಲಿ ತಡೆಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಕಾಲೂಚಕ್ ಮಿಲಿಟರಿ ಸ್ಟೇಶನ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿದ್ದ ಸೇನೆ, 20 ರಿಂದ 25 ಸುತ್ತು ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿ ಬಳಿಕ ಡ್ರೋನ್ ಮಾಯವಾಗಿದ್ದು ಸ್ಥಳೀಯ ನಿವಾಸಿಗಳು ಆತಂಕ ಪಡಬೇಕಾಗಿಲ್ಲ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...