Homeಮುಖಪುಟಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

- Advertisement -
- Advertisement -

ಜಮ್ಮು ವಿಮಾನ ನಿಲ್ಧಾಣದಲ್ಲಿ ಸ್ಪೋಟ ಸಂಭವಿಸಿದ 24 ಗಂಟೆಯೊಳಗೆ ಜಮ್ಮು ಸೇನಾನೆಲೆಯ ಬಳಿ ಎರಡು ಡ್ರೋಣ್‌ಗಳು ಕಾಣಿಸಿಕೊಂಡಿದ್ದು ಸೇನಾಪಡೆಗಳು ಡ್ರೋಣ್‌ಗಳತ್ತ ಗುಂಡು ಹಾರಿಸಿವೆ. ಗುಂಡಿನ ದಾಳಿಯಲ್ಲಿ ಸೇನಾಪಡೆಗಳು ಡ್ರೋನ್‌ಗಳನ್ನು ಹೊಡೆದುರಳಿಸಿವೆ ಎಂದು ಹೇಳಲಾಗುತ್ತಿದ್ದು, ಅಧಿಕೃತವಾದ ಮಾಹಿತಿ ತಿಳಿದುಬಂದಿಲ್ಲ.

ಶನಿವಾರ ಮಧ್ಯರಾತ್ರಿಯ ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿಯಾಗಿ 24 ಗಂಟೆ ಕಳೆಯುವ ಮುನ್ನ ಜಮ್ಮುವಿನ ಭಾರತೀಯ ಭೂಸೇನೆಯ ನೆಲೆಯ ಸಮೀಪ ಮತ್ತೊಮ್ಮೆ ಡ್ರೋಣ್‌ಗಳನ್ನು ಹಾರಿಬಿಡಲಾಗಿದೆ. ಭಾನುವಾರದ ದಾಳಿಯ ನಂತರ ತೀವ್ರ ಕಟ್ಟೆಚ್ಚರವಹಿಸಿದ್ದ ಸೇನಾ ಪಡೆಗಳು ಸಂಭವನೀಯ ದಾಳಿಯನ್ನು ಸೋಮವಾರ ಬೆಳಗಿನ ಜಾವ ತಡೆದಿದ್ದಾರೆ. ಇಂದು ಕಾಣಿಸಿಕೊಂಡ ಡ್ರೋಣ್‌ಗಳು ಸ್ಫೋಟಕಗಳನ್ನು ಹೊತ್ತಿದ್ದವೇ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ಯಾವ ಭಾಗದಿಂದ ಡ್ರೋಣ್‌ಗಳು ಹಾರಿ ಬಂದಿದ್ದವು ಎಂದು ಸೇನಾಪಡಗಳು ತನಿಖೆ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳ (NIA) ದ ಅಧಿಕಾರಿಗಳು  ಮತ್ತು ಬಾಂಬ್ ನಿಷ್ಕ್ರೀಯ ದಳದ ತಜ್ಞರು ಕೂಡ ಡ್ರೋಣ್‌ಗಳ ತನಿಖೆಯಲ್ಲಿ ತೊಡಗಿದ್ದಾರೆ.

“ಮತ್ತೊಮ್ಮೆ ಡ್ರೋನ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ಬಾರಿ ಉಗ್ರರು ಸೇನಾ ಶಿಬಿರವನ್ನ ಗುರಿಯಾಗಿಸಿಕೊಂಡಿದ್ದರು. ಜಮ್ಮು ಏರ್ ಫೋರ್ಸ್ ಸ್ಟೇಶನ್ ಮೇಲಿನ ಡ್ರೋನ್ ದಾಳಿ ಬಳಿಕ ಇಂದು ಮಿಲಿಟರಿ ಸ್ಟೇಶನ್ ಗುರಿ ಮಾಡಿಕೊಂಡಿದ್ದರು. ಕಡಿಮೆ ತೂಕದ ಸ್ಪೋಟಕಗಳನ್ನು ಹೊತ್ತಿದ್ದ ಡ್ರೋಣ್‌ಗಳಿವು ಎಂದು ಶಂಕಿಸಲಾಗಿದೆ. ಭಾರಿ ಪ್ರಮಾಣದ ಭಯೋತ್ಪಾದಕ ದಾಳಿಯನ್ನು ಕೂದಲೆಳೆಯ ಅಂತರದಲ್ಲಿ ತಡೆಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಕಾಲೂಚಕ್ ಮಿಲಿಟರಿ ಸ್ಟೇಶನ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿದ್ದ ಸೇನೆ, 20 ರಿಂದ 25 ಸುತ್ತು ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿ ಬಳಿಕ ಡ್ರೋನ್ ಮಾಯವಾಗಿದ್ದು ಸ್ಥಳೀಯ ನಿವಾಸಿಗಳು ಆತಂಕ ಪಡಬೇಕಾಗಿಲ್ಲ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....