HomeUncategorizedಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

- Advertisement -
- Advertisement -

ಲೋಕಸಭೆಯಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಂದು ಇಬ್ಬರು ಪ್ರತಿಪಕ್ಷದ ಸಂಸದರನ್ನು ಚಳಿಗಾಲದ ವಿಶೇಷ ಅಧಿವೇಶನದವರೆಗೆ ಅಮಾನತು ಮಾಡಲಾಗಿದೆ. ಇದರಿಂದಾಗಿ ಒಂದೇ ವಾರದಲ್ಲಿ ಉಭಯ ಸದನಗಳಿಂದ 143 ಸಂಸದರನ್ನು ಅಮಾನತು ಮಾಡಿದಂತಾಗಿದೆ. ಚಳಿಗಾಲದ ಅಧಿವೇಶನದ ಅಂತ್ಯಕ್ಕೆ ಇನ್ನೆರಡು ದಿನಗಳು ಬಾಕಿ ಇದ್ದು, ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ಕೊನೆಯ ಪೂರ್ಣ ಅಧಿವೇಶನದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿಯನ್ನು ಮೂಡಿಸಿದೆ.

ಕೇರಳದ ಸಂಸದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಸಂಸದ ಎ.ಎಂ.ಆರೀಫ್ ಅವರನ್ನು ಇಂದು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಅಮಾನತು ಪ್ರಸ್ತಾವನೆ ಮಂಡಿಸಿದ್ದು, ಸದನ ಅದನ್ನು ಅಂಗೀಕರಿಸಿದ ಬಳಿಕ ಅಮಾನತು ಮಾಡಲಾಗಿದೆ. ಇದರೊಂದಿಗೆ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದ ಪ್ರತಿಪಕ್ಷಗಳ ಒಟ್ಟು 141 ಸದಸ್ಯರನ್ನು ಲೋಕಸಭೆ ಮತ್ತು ರಾಜ್ಯ ಸಭೆಗಳಿಂದ ಅಮಾನತು ಮಾಡಲಾಗಿತ್ತು. ಇಂದು ಇನ್ನಿಬ್ಬರು ಸಂಸದರ ಅಮಾನತಿನ ಬಳಿಕ ಈ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿನ 142 ಪ್ರತಿಪಕ್ಷಗಳ ಸಂಸದರಲ್ಲಿ 97 ಮಂದಿಯನ್ನು ಈಗಗಲೇ ಅಮಾನತುಗೊಳಿಸಲಾಗಿದೆ.  ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ ಅಮಾನತಿನ ಬಳಿಕ 100ಕ್ಕಿಂತ ಕಡಿಮೆ ಪ್ರತಿಪಕ್ಷಗಳ ಸಂಸದರು ಉಳಿದಿರುವುದರಿಂದ ರಾಜ್ಯಸಭೆಯಲ್ಲಿ ಬಿಲ್‌ ಪಾಸ್‌ಗಾಗಿ ಸದನದಲ್ಲಿ ಸರ್ಕಾರವು ಯಾವುದೇ ಸವಾಲನ್ನು ಹೊಂದಿಲ್ಲ.

ಇಬ್ಬರು ಅಪರಿಚಿತ ಯುವಕರು ಲೋಕಸಭೆಗೆ ನುಗ್ಗಿ ಗ್ಯಾಸ್ ಸ್ಪ್ರೇ ಮಾಡಿದ ಬಳಿಕ ಭಾರೀ ಭದ್ರತಾ ಲೋಪದ ಪ್ರಕರಣದಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪಟ್ಟು ಹಿಡಿದಿದ್ದವು. ಪ್ರಧಾನಿ ಮತ್ತು ಅಮಿತ್‌ ಶಾ ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಕೊಡುತ್ತಾರೆ. ಆದರೆ ಸದನಕ್ಕೆ ಬಿಜೆಪಿ ಮತ್ತು ಸರಕಾರದ ಪರವಾಗಿ ಗೃಹಸಚಿವರು ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷ ಆಗ್ರಹಿಸಿತ್ತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದೊಳಗಿನ ಯಾವುದೇ ಭದ್ರತೆಗೆ ಸಂಬಂಧಿಸಿದ ಘಟನೆಯು ಲೋಕಸಭೆಯ ಸೆಕ್ರೆಟ್ರಿಯೇಟ್‌ ವ್ಯಾಪ್ತಿಗೆ ಬರುತ್ತದೆ. ಈ ಬಗ್ಗೆ ಸರ್ಕಾರವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಮಾತನಾಡಿಲ್ಲ. ಆದರೆ ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಭದ್ರತಾ ಲೋಪವು ಅತ್ಯಂತ ಗಂಭೀರ ಘಟನೆಯಾಗಿದೆ. ತನಿಖೆಯ ಅಗತ್ಯವಿದೆ ಆದರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...