HomeUncategorizedಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

- Advertisement -
- Advertisement -

ಲೋಕಸಭೆಯಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಂದು ಇಬ್ಬರು ಪ್ರತಿಪಕ್ಷದ ಸಂಸದರನ್ನು ಚಳಿಗಾಲದ ವಿಶೇಷ ಅಧಿವೇಶನದವರೆಗೆ ಅಮಾನತು ಮಾಡಲಾಗಿದೆ. ಇದರಿಂದಾಗಿ ಒಂದೇ ವಾರದಲ್ಲಿ ಉಭಯ ಸದನಗಳಿಂದ 143 ಸಂಸದರನ್ನು ಅಮಾನತು ಮಾಡಿದಂತಾಗಿದೆ. ಚಳಿಗಾಲದ ಅಧಿವೇಶನದ ಅಂತ್ಯಕ್ಕೆ ಇನ್ನೆರಡು ದಿನಗಳು ಬಾಕಿ ಇದ್ದು, ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ಕೊನೆಯ ಪೂರ್ಣ ಅಧಿವೇಶನದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿಯನ್ನು ಮೂಡಿಸಿದೆ.

ಕೇರಳದ ಸಂಸದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಸಂಸದ ಎ.ಎಂ.ಆರೀಫ್ ಅವರನ್ನು ಇಂದು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಅಮಾನತು ಪ್ರಸ್ತಾವನೆ ಮಂಡಿಸಿದ್ದು, ಸದನ ಅದನ್ನು ಅಂಗೀಕರಿಸಿದ ಬಳಿಕ ಅಮಾನತು ಮಾಡಲಾಗಿದೆ. ಇದರೊಂದಿಗೆ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದ ಪ್ರತಿಪಕ್ಷಗಳ ಒಟ್ಟು 141 ಸದಸ್ಯರನ್ನು ಲೋಕಸಭೆ ಮತ್ತು ರಾಜ್ಯ ಸಭೆಗಳಿಂದ ಅಮಾನತು ಮಾಡಲಾಗಿತ್ತು. ಇಂದು ಇನ್ನಿಬ್ಬರು ಸಂಸದರ ಅಮಾನತಿನ ಬಳಿಕ ಈ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿನ 142 ಪ್ರತಿಪಕ್ಷಗಳ ಸಂಸದರಲ್ಲಿ 97 ಮಂದಿಯನ್ನು ಈಗಗಲೇ ಅಮಾನತುಗೊಳಿಸಲಾಗಿದೆ.  ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ ಅಮಾನತಿನ ಬಳಿಕ 100ಕ್ಕಿಂತ ಕಡಿಮೆ ಪ್ರತಿಪಕ್ಷಗಳ ಸಂಸದರು ಉಳಿದಿರುವುದರಿಂದ ರಾಜ್ಯಸಭೆಯಲ್ಲಿ ಬಿಲ್‌ ಪಾಸ್‌ಗಾಗಿ ಸದನದಲ್ಲಿ ಸರ್ಕಾರವು ಯಾವುದೇ ಸವಾಲನ್ನು ಹೊಂದಿಲ್ಲ.

ಇಬ್ಬರು ಅಪರಿಚಿತ ಯುವಕರು ಲೋಕಸಭೆಗೆ ನುಗ್ಗಿ ಗ್ಯಾಸ್ ಸ್ಪ್ರೇ ಮಾಡಿದ ಬಳಿಕ ಭಾರೀ ಭದ್ರತಾ ಲೋಪದ ಪ್ರಕರಣದಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪಟ್ಟು ಹಿಡಿದಿದ್ದವು. ಪ್ರಧಾನಿ ಮತ್ತು ಅಮಿತ್‌ ಶಾ ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಕೊಡುತ್ತಾರೆ. ಆದರೆ ಸದನಕ್ಕೆ ಬಿಜೆಪಿ ಮತ್ತು ಸರಕಾರದ ಪರವಾಗಿ ಗೃಹಸಚಿವರು ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷ ಆಗ್ರಹಿಸಿತ್ತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದೊಳಗಿನ ಯಾವುದೇ ಭದ್ರತೆಗೆ ಸಂಬಂಧಿಸಿದ ಘಟನೆಯು ಲೋಕಸಭೆಯ ಸೆಕ್ರೆಟ್ರಿಯೇಟ್‌ ವ್ಯಾಪ್ತಿಗೆ ಬರುತ್ತದೆ. ಈ ಬಗ್ಗೆ ಸರ್ಕಾರವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಮಾತನಾಡಿಲ್ಲ. ಆದರೆ ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಭದ್ರತಾ ಲೋಪವು ಅತ್ಯಂತ ಗಂಭೀರ ಘಟನೆಯಾಗಿದೆ. ತನಿಖೆಯ ಅಗತ್ಯವಿದೆ ಆದರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...