HomeUncategorizedಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

- Advertisement -
- Advertisement -

ಲೋಕಸಭೆಯಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಂದು ಇಬ್ಬರು ಪ್ರತಿಪಕ್ಷದ ಸಂಸದರನ್ನು ಚಳಿಗಾಲದ ವಿಶೇಷ ಅಧಿವೇಶನದವರೆಗೆ ಅಮಾನತು ಮಾಡಲಾಗಿದೆ. ಇದರಿಂದಾಗಿ ಒಂದೇ ವಾರದಲ್ಲಿ ಉಭಯ ಸದನಗಳಿಂದ 143 ಸಂಸದರನ್ನು ಅಮಾನತು ಮಾಡಿದಂತಾಗಿದೆ. ಚಳಿಗಾಲದ ಅಧಿವೇಶನದ ಅಂತ್ಯಕ್ಕೆ ಇನ್ನೆರಡು ದಿನಗಳು ಬಾಕಿ ಇದ್ದು, ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ಕೊನೆಯ ಪೂರ್ಣ ಅಧಿವೇಶನದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿಯನ್ನು ಮೂಡಿಸಿದೆ.

ಕೇರಳದ ಸಂಸದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಸಂಸದ ಎ.ಎಂ.ಆರೀಫ್ ಅವರನ್ನು ಇಂದು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಅಮಾನತು ಪ್ರಸ್ತಾವನೆ ಮಂಡಿಸಿದ್ದು, ಸದನ ಅದನ್ನು ಅಂಗೀಕರಿಸಿದ ಬಳಿಕ ಅಮಾನತು ಮಾಡಲಾಗಿದೆ. ಇದರೊಂದಿಗೆ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದ ಪ್ರತಿಪಕ್ಷಗಳ ಒಟ್ಟು 141 ಸದಸ್ಯರನ್ನು ಲೋಕಸಭೆ ಮತ್ತು ರಾಜ್ಯ ಸಭೆಗಳಿಂದ ಅಮಾನತು ಮಾಡಲಾಗಿತ್ತು. ಇಂದು ಇನ್ನಿಬ್ಬರು ಸಂಸದರ ಅಮಾನತಿನ ಬಳಿಕ ಈ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿನ 142 ಪ್ರತಿಪಕ್ಷಗಳ ಸಂಸದರಲ್ಲಿ 97 ಮಂದಿಯನ್ನು ಈಗಗಲೇ ಅಮಾನತುಗೊಳಿಸಲಾಗಿದೆ.  ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ ಅಮಾನತಿನ ಬಳಿಕ 100ಕ್ಕಿಂತ ಕಡಿಮೆ ಪ್ರತಿಪಕ್ಷಗಳ ಸಂಸದರು ಉಳಿದಿರುವುದರಿಂದ ರಾಜ್ಯಸಭೆಯಲ್ಲಿ ಬಿಲ್‌ ಪಾಸ್‌ಗಾಗಿ ಸದನದಲ್ಲಿ ಸರ್ಕಾರವು ಯಾವುದೇ ಸವಾಲನ್ನು ಹೊಂದಿಲ್ಲ.

ಇಬ್ಬರು ಅಪರಿಚಿತ ಯುವಕರು ಲೋಕಸಭೆಗೆ ನುಗ್ಗಿ ಗ್ಯಾಸ್ ಸ್ಪ್ರೇ ಮಾಡಿದ ಬಳಿಕ ಭಾರೀ ಭದ್ರತಾ ಲೋಪದ ಪ್ರಕರಣದಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪಟ್ಟು ಹಿಡಿದಿದ್ದವು. ಪ್ರಧಾನಿ ಮತ್ತು ಅಮಿತ್‌ ಶಾ ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಕೊಡುತ್ತಾರೆ. ಆದರೆ ಸದನಕ್ಕೆ ಬಿಜೆಪಿ ಮತ್ತು ಸರಕಾರದ ಪರವಾಗಿ ಗೃಹಸಚಿವರು ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷ ಆಗ್ರಹಿಸಿತ್ತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದೊಳಗಿನ ಯಾವುದೇ ಭದ್ರತೆಗೆ ಸಂಬಂಧಿಸಿದ ಘಟನೆಯು ಲೋಕಸಭೆಯ ಸೆಕ್ರೆಟ್ರಿಯೇಟ್‌ ವ್ಯಾಪ್ತಿಗೆ ಬರುತ್ತದೆ. ಈ ಬಗ್ಗೆ ಸರ್ಕಾರವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಮಾತನಾಡಿಲ್ಲ. ಆದರೆ ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಭದ್ರತಾ ಲೋಪವು ಅತ್ಯಂತ ಗಂಭೀರ ಘಟನೆಯಾಗಿದೆ. ತನಿಖೆಯ ಅಗತ್ಯವಿದೆ ಆದರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...