HomeUncategorizedಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

- Advertisement -
- Advertisement -

ಲೋಕಸಭೆಯಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಂದು ಇಬ್ಬರು ಪ್ರತಿಪಕ್ಷದ ಸಂಸದರನ್ನು ಚಳಿಗಾಲದ ವಿಶೇಷ ಅಧಿವೇಶನದವರೆಗೆ ಅಮಾನತು ಮಾಡಲಾಗಿದೆ. ಇದರಿಂದಾಗಿ ಒಂದೇ ವಾರದಲ್ಲಿ ಉಭಯ ಸದನಗಳಿಂದ 143 ಸಂಸದರನ್ನು ಅಮಾನತು ಮಾಡಿದಂತಾಗಿದೆ. ಚಳಿಗಾಲದ ಅಧಿವೇಶನದ ಅಂತ್ಯಕ್ಕೆ ಇನ್ನೆರಡು ದಿನಗಳು ಬಾಕಿ ಇದ್ದು, ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ನಡೆಯುತ್ತಿರುವ ಕೊನೆಯ ಪೂರ್ಣ ಅಧಿವೇಶನದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿಯನ್ನು ಮೂಡಿಸಿದೆ.

ಕೇರಳದ ಸಂಸದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಸಂಸದ ಎ.ಎಂ.ಆರೀಫ್ ಅವರನ್ನು ಇಂದು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಅಮಾನತು ಪ್ರಸ್ತಾವನೆ ಮಂಡಿಸಿದ್ದು, ಸದನ ಅದನ್ನು ಅಂಗೀಕರಿಸಿದ ಬಳಿಕ ಅಮಾನತು ಮಾಡಲಾಗಿದೆ. ಇದರೊಂದಿಗೆ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದ ಪ್ರತಿಪಕ್ಷಗಳ ಒಟ್ಟು 141 ಸದಸ್ಯರನ್ನು ಲೋಕಸಭೆ ಮತ್ತು ರಾಜ್ಯ ಸಭೆಗಳಿಂದ ಅಮಾನತು ಮಾಡಲಾಗಿತ್ತು. ಇಂದು ಇನ್ನಿಬ್ಬರು ಸಂಸದರ ಅಮಾನತಿನ ಬಳಿಕ ಈ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿನ 142 ಪ್ರತಿಪಕ್ಷಗಳ ಸಂಸದರಲ್ಲಿ 97 ಮಂದಿಯನ್ನು ಈಗಗಲೇ ಅಮಾನತುಗೊಳಿಸಲಾಗಿದೆ.  ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ ಅಮಾನತಿನ ಬಳಿಕ 100ಕ್ಕಿಂತ ಕಡಿಮೆ ಪ್ರತಿಪಕ್ಷಗಳ ಸಂಸದರು ಉಳಿದಿರುವುದರಿಂದ ರಾಜ್ಯಸಭೆಯಲ್ಲಿ ಬಿಲ್‌ ಪಾಸ್‌ಗಾಗಿ ಸದನದಲ್ಲಿ ಸರ್ಕಾರವು ಯಾವುದೇ ಸವಾಲನ್ನು ಹೊಂದಿಲ್ಲ.

ಇಬ್ಬರು ಅಪರಿಚಿತ ಯುವಕರು ಲೋಕಸಭೆಗೆ ನುಗ್ಗಿ ಗ್ಯಾಸ್ ಸ್ಪ್ರೇ ಮಾಡಿದ ಬಳಿಕ ಭಾರೀ ಭದ್ರತಾ ಲೋಪದ ಪ್ರಕರಣದಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪಟ್ಟು ಹಿಡಿದಿದ್ದವು. ಪ್ರಧಾನಿ ಮತ್ತು ಅಮಿತ್‌ ಶಾ ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಕೊಡುತ್ತಾರೆ. ಆದರೆ ಸದನಕ್ಕೆ ಬಿಜೆಪಿ ಮತ್ತು ಸರಕಾರದ ಪರವಾಗಿ ಗೃಹಸಚಿವರು ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷ ಆಗ್ರಹಿಸಿತ್ತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದೊಳಗಿನ ಯಾವುದೇ ಭದ್ರತೆಗೆ ಸಂಬಂಧಿಸಿದ ಘಟನೆಯು ಲೋಕಸಭೆಯ ಸೆಕ್ರೆಟ್ರಿಯೇಟ್‌ ವ್ಯಾಪ್ತಿಗೆ ಬರುತ್ತದೆ. ಈ ಬಗ್ಗೆ ಸರ್ಕಾರವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಮಾತನಾಡಿಲ್ಲ. ಆದರೆ ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಭದ್ರತಾ ಲೋಪವು ಅತ್ಯಂತ ಗಂಭೀರ ಘಟನೆಯಾಗಿದೆ. ತನಿಖೆಯ ಅಗತ್ಯವಿದೆ ಆದರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...