Homeಮುಖಪುಟಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ...

ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

- Advertisement -
- Advertisement -

ಜೈಪುರ-ಮುಂಬೈ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ಕಾನ್ಸ್‌ಟೇಬಲ್ ಚೇತನ್‌ಸಿಂಗ್‌  ಚೌಧರಿ ಎಂಬಾತ  ಹಿರಿಯ ಸಹೋದ್ಯೋಗಿ ಮತ್ತು ಮೂವರು ಮುಸ್ಲಿಂ ಸಮುದಾಯಕ್ಕೆ ಸೇರಿದ ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡವಾಗಿ ಇಬ್ಬರು ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ವಜಾ ಗೊಳಿಸಲಾಗಿದೆ. ಇವರು ಕೃತ್ಯ ನಡೆದ ವೇಳೆ ಪಕ್ಕದಲ್ಲೇ ಇದ್ದು, ಕೃತ್ಯವನ್ನು ಗಮನಿಸಿದರೂ ರಕ್ಷಣೆ ಮಾಡದೆ ಅಡಗಿ ಕುಳಿತಿದ್ದರು ಎನ್ನವುದು ತನಿಖೆಯ ವೇಳೆ ಬಯಲಾಗಿದೆ.

ಶುಕ್ರವಾರ ಪಶ್ಚಿಮ ರೈಲ್ವೇಯ ಮುಂಬೈ ವಿಭಾಗದ ಆರ್‌ಪಿಎಫ್‌ನ ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ಎಸ್‌ಕೆಎಸ್ ರಾಥೋಡ್ ಅವರು ಕಾನ್‌ಸ್ಟೆಬಲ್‌ಗಳಾದ ಅಮಯ್ ಆಚಾರ್ಯ ಮತ್ತು ನರೇಂದ್ರ ಪರ್ಮಾರ್ ಅವರನ್ನು ವಜಾಗೊಳಿಸಿದ್ದು, ಅಮಾನತುಗೊಂಡ ಪೇದೆಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಪ್ರಯಾಣಿಕರಿಗೆ ಭದ್ರತೆ ಮತ್ತು ರಕ್ಷಣೆಯನ್ನು ಒದಗಿಸುವುದು ಕರ್ತವ್ಯದಲ್ಲಿರುವ ಆರೋಪಿ ಕಾನ್‌ಸ್ಟೆಬಲ್‌ಗಳ ಜವಾಬ್ದಾರಿಯಾಗಿತ್ತು, ಆದರೆ, ಅವರು ರಕ್ಷಣೆ ನೀಡಲು ವಿಫಲರಾಗಿದ್ದಾರೆ. ಆರೋಪಿ ಕಾನ್ಸ್‌ಟೇಬಲ್‌ನ ಕೃತ್ಯವು ಪ್ರಯಾಣಿಕರಲ್ಲಿ ಆರ್‌ಪಿಎಫ್‌ನ ಮೇಲಿನ ನಂಬಿಕೆಯನ್ನು ಕುಗ್ಗಿಸುತ್ತದೆ ಮತ್ತು ಶಿಸ್ತಿನ ಬಗ್ಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ. ಅದೇ ರೀತಿ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು, ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲವಾದ ಕಾನ್ಸ್‌ಟೇಬಲ್‌ಗಳನ್ನು ಪಡೆಯಲ್ಲಿ ಮುಂದುವರಿಸುವುದು ಆರ್‌ಪಿಎಫ್‌ಗೆ ಮಾರಕವಾಗುತ್ತದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆಚಾರ್ಯ ಅವರ ವಜಾ ಆದೇಶದ ಪ್ರಕಾರ, ಅವರು ಘಟನೆಯ ವೇಳೆ ಮಧ್ಯಪ್ರವೇಶಿಸುವ ಬದಲು ಎಸ್ -4 ಕೋಚ್‌ನ ವಾಶ್‌ರೂಮ್‌ನಲ್ಲಿ ಅಡಗಿಕೊಂಡಿದ್ದರು. ಪರ್ಮಾರ್ ಅವರ ವಜಾ ಆದೇಶದ ಪ್ರಕಾರ, ಚೌಧರಿ ತನ್ನ ಮುಂದೆ ಬಂದೂಕು ತೋರಿಸಿ ಒಬ್ಬ ಪ್ರಯಾಣಿಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಕ್ಷಿಗಳ ಹೇಳಿಕೆಗಳ ಪ್ರಕಾರ ಈ ವೇಳೆ ಪರ್ಮಾರ್ ಮಧ್ಯಪ್ರವೇಶಿಸುವ ಬದಲು ಇತರ ಪ್ರಯಾಣಿಕರ ಹಿಂದೆ ಅಡಗಿಕೊಂಡಿದ್ದನ್ನು ತೋರಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಸೇವೆಯಿಂದ ವಜಾಗೊಂಡಿರುವ ಕೃತ್ಯದ ಆರೋಪಿ ಚೌಧರಿ ಪ್ರಸ್ತುತ ಅಕೋಲಾ ಜೈಲಿನಲ್ಲಿದ್ದಾನೆ. ಈತ ಜೈಪುರ-ಮುಂಬೈ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮೂವರು ಪ್ರಯಾಣಿಕರಾದ ಅಬ್ದುಲ್ ಖಾದರ್ ಮೊಹಮ್ಮದ್ ಹುಸೇನ್ ಭಾನಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಟಿಕಾರಾಂ ಮೀನಾ ಅವರನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ. ಈತನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು. ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ ಬಂಧಿಸಿದ್ದರು.

ಇದನ್ನು ಓದಿ: ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...