Homeಅಂತರಾಷ್ಟ್ರೀಯಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ...!

ಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ…!

ನೌಕೆಯೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

- Advertisement -
- Advertisement -

ಅಮೆರಿಕಾ ನೌಕಾಪಡೆ ತನ್ನ ಎರಡು ಪರಮಾಣು ಚಾಲಿತ ವಿಮಾನವಾಹಕ ನೌಕೆಗಳನ್ನು ದಕ್ಷಿಣ ಚೀನಾ ಸಮುದ್ರದಕ್ಕೆ ಮಿತ್ರರಾಷ್ಟ್ರಗಳ ಸಮರಾಭ್ಯಾಸಕ್ಕಾಗಿ ಕಳುಹಿಸಿಕೊಟ್ಟಿದೆ.

ಯುಎಸ್‌ಎಸ್ ನಿಮಿಟ್ಜ್ ಹಾಗೂ ಯುಎಸ್‌ಎಸ್ ರೀಗನ್ ಎಂಬ ಯುದ್ದ ನೌಕೆಗಳು ಪಿಲಿಪೈನ್ಸ್‌ ಸಮುದ್ರವನ್ನು ಹಾಗೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

ಈ ಹಿಂದೆ ಚೀನಾ ಸೈನ್ಯವೂ ಅಲ್ಲಿ ಸಮರಾಭ್ಯಾಸವನ್ನು ಮಾಡಿತ್ತು. ಇದು ನರೆಯ ದೇಶಗಳ ಅಸಮಧಾನಕ್ಕೆ ಗುರಿಯಾಗಿತ್ತು. ಇಂಡೋ ಫೆಸಿಫಿಕನ್ನು ಮುಕ್ತವಾಗಿಡುವ ತನ್ನ ಉದ್ದೇಶಕ್ಕಾಗಿ ಸಮರ ನೌಕೆಗಳನ್ನು ಕಳುಹಿಸಲಾಗಿದೆ ಎಂದು ಅಮೆರಿಕಾ ನೌಕಾಪಡೆ ಹೇಳಿದೆ.

“ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ನಾವು ಬದ್ಧರಾಗಿದ್ದೇವೆ ಎಂದು ನಮ್ಮ ಪಾಲುದಾರರು ಮತ್ತು ಮಿತ್ರರಿಗೆ ನಿಸ್ಸಂದಿಗ್ಧವಾದ ಸಂಕೇತವನ್ನು ತೋರಿಸುವುದು ಇದರ ಉದ್ದೇಶ” ಎಂದು ಯುಎಸ್ಎಸ್ ರೊನಾಲ್ಡ್ ರೇಗನ್ ನೇತೃತ್ವದ ಸ್ಟ್ರೈಕ್ ಗ್ರೂಪ್‌ ಕಮಾಂಡರ್ ರಿಯರ್ ಅಡ್ಮಿರಲ್ ಜಾರ್ಜ್ ಎಂ ವಿಕಾಫ್ ಹೇಳಿದ್ದಾರೆ.

ದಕ್ಷಿಣ ಚೀನಾ ಸಮುದ್ರದ 90% ನಷ್ಟು ಭಾಗವನ್ನು ಚೀನಾ ತನ್ನೆಂದು ಹೇಳಿಕೊಂಡಿದೆ, ಇದರ ಮೂಲಕ ಪ್ರತಿವರ್ಷ ಸುಮಾರು 3 ಟ್ರಿಲಿಯನ್ ವ್ಯಾಪಾರವು ಹಾದುಹೋಗುತ್ತದೆ. ಕಳೆದ ಒಂದು ದಶಕದಿಂದ ಚೀನಾ ಇಲ್ಲಿನ ಹಲವಾರು ಪ್ರದೇಶದಲ್ಲಿ ಮಾನವ ನಿರ್ಮಿತ ದ್ವೀಪಗಳನ್ನು ನಿರ್ಮಿಸಿ ಮಿಲಿಟರಿ ವಾಯುನೆಲೆಗಳು ಸೇರಿದಂತೆ ಸೇನಾ ನೆಲೆಗಳನ್ನು ಸ್ಥಾಪಿಸಲು ಮುಂದಾಗಿದೆ.

ಬ್ರೂನಿ, ಮಲೇಷ್ಯಾ, ಫಿಲಿಪೈನ್ಸ್, ತೈವಾನ್ ಮತ್ತು ವಿಯೆಟ್ನಾಂ ಕೂಡ ದಕ್ಷಿಣ ಚೀನಾ ಸಮುದ್ರದ ಕೆಲವು ಭಾಗಗಳಿಗೆ ತಮ್ಮದೆಂದು ವಾದಿಸುತ್ತಿದೆ.


ಓದಿ: ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆಂದ ಅಮೆರಿಕಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...