Homeಅಂತರಾಷ್ಟ್ರೀಯಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ...!

ಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ…!

ನೌಕೆಯೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

- Advertisement -
- Advertisement -

ಅಮೆರಿಕಾ ನೌಕಾಪಡೆ ತನ್ನ ಎರಡು ಪರಮಾಣು ಚಾಲಿತ ವಿಮಾನವಾಹಕ ನೌಕೆಗಳನ್ನು ದಕ್ಷಿಣ ಚೀನಾ ಸಮುದ್ರದಕ್ಕೆ ಮಿತ್ರರಾಷ್ಟ್ರಗಳ ಸಮರಾಭ್ಯಾಸಕ್ಕಾಗಿ ಕಳುಹಿಸಿಕೊಟ್ಟಿದೆ.

ಯುಎಸ್‌ಎಸ್ ನಿಮಿಟ್ಜ್ ಹಾಗೂ ಯುಎಸ್‌ಎಸ್ ರೀಗನ್ ಎಂಬ ಯುದ್ದ ನೌಕೆಗಳು ಪಿಲಿಪೈನ್ಸ್‌ ಸಮುದ್ರವನ್ನು ಹಾಗೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

ಈ ಹಿಂದೆ ಚೀನಾ ಸೈನ್ಯವೂ ಅಲ್ಲಿ ಸಮರಾಭ್ಯಾಸವನ್ನು ಮಾಡಿತ್ತು. ಇದು ನರೆಯ ದೇಶಗಳ ಅಸಮಧಾನಕ್ಕೆ ಗುರಿಯಾಗಿತ್ತು. ಇಂಡೋ ಫೆಸಿಫಿಕನ್ನು ಮುಕ್ತವಾಗಿಡುವ ತನ್ನ ಉದ್ದೇಶಕ್ಕಾಗಿ ಸಮರ ನೌಕೆಗಳನ್ನು ಕಳುಹಿಸಲಾಗಿದೆ ಎಂದು ಅಮೆರಿಕಾ ನೌಕಾಪಡೆ ಹೇಳಿದೆ.

“ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ನಾವು ಬದ್ಧರಾಗಿದ್ದೇವೆ ಎಂದು ನಮ್ಮ ಪಾಲುದಾರರು ಮತ್ತು ಮಿತ್ರರಿಗೆ ನಿಸ್ಸಂದಿಗ್ಧವಾದ ಸಂಕೇತವನ್ನು ತೋರಿಸುವುದು ಇದರ ಉದ್ದೇಶ” ಎಂದು ಯುಎಸ್ಎಸ್ ರೊನಾಲ್ಡ್ ರೇಗನ್ ನೇತೃತ್ವದ ಸ್ಟ್ರೈಕ್ ಗ್ರೂಪ್‌ ಕಮಾಂಡರ್ ರಿಯರ್ ಅಡ್ಮಿರಲ್ ಜಾರ್ಜ್ ಎಂ ವಿಕಾಫ್ ಹೇಳಿದ್ದಾರೆ.

ದಕ್ಷಿಣ ಚೀನಾ ಸಮುದ್ರದ 90% ನಷ್ಟು ಭಾಗವನ್ನು ಚೀನಾ ತನ್ನೆಂದು ಹೇಳಿಕೊಂಡಿದೆ, ಇದರ ಮೂಲಕ ಪ್ರತಿವರ್ಷ ಸುಮಾರು 3 ಟ್ರಿಲಿಯನ್ ವ್ಯಾಪಾರವು ಹಾದುಹೋಗುತ್ತದೆ. ಕಳೆದ ಒಂದು ದಶಕದಿಂದ ಚೀನಾ ಇಲ್ಲಿನ ಹಲವಾರು ಪ್ರದೇಶದಲ್ಲಿ ಮಾನವ ನಿರ್ಮಿತ ದ್ವೀಪಗಳನ್ನು ನಿರ್ಮಿಸಿ ಮಿಲಿಟರಿ ವಾಯುನೆಲೆಗಳು ಸೇರಿದಂತೆ ಸೇನಾ ನೆಲೆಗಳನ್ನು ಸ್ಥಾಪಿಸಲು ಮುಂದಾಗಿದೆ.

ಬ್ರೂನಿ, ಮಲೇಷ್ಯಾ, ಫಿಲಿಪೈನ್ಸ್, ತೈವಾನ್ ಮತ್ತು ವಿಯೆಟ್ನಾಂ ಕೂಡ ದಕ್ಷಿಣ ಚೀನಾ ಸಮುದ್ರದ ಕೆಲವು ಭಾಗಗಳಿಗೆ ತಮ್ಮದೆಂದು ವಾದಿಸುತ್ತಿದೆ.


ಓದಿ: ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆಂದ ಅಮೆರಿಕಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...