Homeಅಂತರಾಷ್ಟ್ರೀಯಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ...!

ಅಮೆರಿಕದ 2 ಪರಮಾಣು ಚಾಲಿತ ಯುದ್ಧನೌಕೆ ದಕ್ಷಿಣ ಚೀನಾ ಸಮುದ್ರದತ್ತ…!

ನೌಕೆಯೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

- Advertisement -
- Advertisement -

ಅಮೆರಿಕಾ ನೌಕಾಪಡೆ ತನ್ನ ಎರಡು ಪರಮಾಣು ಚಾಲಿತ ವಿಮಾನವಾಹಕ ನೌಕೆಗಳನ್ನು ದಕ್ಷಿಣ ಚೀನಾ ಸಮುದ್ರದಕ್ಕೆ ಮಿತ್ರರಾಷ್ಟ್ರಗಳ ಸಮರಾಭ್ಯಾಸಕ್ಕಾಗಿ ಕಳುಹಿಸಿಕೊಟ್ಟಿದೆ.

ಯುಎಸ್‌ಎಸ್ ನಿಮಿಟ್ಜ್ ಹಾಗೂ ಯುಎಸ್‌ಎಸ್ ರೀಗನ್ ಎಂಬ ಯುದ್ದ ನೌಕೆಗಳು ಪಿಲಿಪೈನ್ಸ್‌ ಸಮುದ್ರವನ್ನು ಹಾಗೂ ದಕ್ಷಿಣ ಚೀನಾ ಸಮುದ್ರದೊಂದಿಗೆ ಸಂಪರ್ಕಿಸುವ ತೈವಾನ್ ಮತ್ತು ಲುಝೋನ್ ದ್ವೀಪದ ನಡುವಿನ ಜಲಸಂಧಿಯಾದ ಲುಝೋನ್ ಜಲಸಂಧಿಯನ್ನು ದಾಟುತ್ತಿವೆ ಎಂದು ವರದಿಯಾಗಿದೆ.

ಈ ಹಿಂದೆ ಚೀನಾ ಸೈನ್ಯವೂ ಅಲ್ಲಿ ಸಮರಾಭ್ಯಾಸವನ್ನು ಮಾಡಿತ್ತು. ಇದು ನರೆಯ ದೇಶಗಳ ಅಸಮಧಾನಕ್ಕೆ ಗುರಿಯಾಗಿತ್ತು. ಇಂಡೋ ಫೆಸಿಫಿಕನ್ನು ಮುಕ್ತವಾಗಿಡುವ ತನ್ನ ಉದ್ದೇಶಕ್ಕಾಗಿ ಸಮರ ನೌಕೆಗಳನ್ನು ಕಳುಹಿಸಲಾಗಿದೆ ಎಂದು ಅಮೆರಿಕಾ ನೌಕಾಪಡೆ ಹೇಳಿದೆ.

“ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ನಾವು ಬದ್ಧರಾಗಿದ್ದೇವೆ ಎಂದು ನಮ್ಮ ಪಾಲುದಾರರು ಮತ್ತು ಮಿತ್ರರಿಗೆ ನಿಸ್ಸಂದಿಗ್ಧವಾದ ಸಂಕೇತವನ್ನು ತೋರಿಸುವುದು ಇದರ ಉದ್ದೇಶ” ಎಂದು ಯುಎಸ್ಎಸ್ ರೊನಾಲ್ಡ್ ರೇಗನ್ ನೇತೃತ್ವದ ಸ್ಟ್ರೈಕ್ ಗ್ರೂಪ್‌ ಕಮಾಂಡರ್ ರಿಯರ್ ಅಡ್ಮಿರಲ್ ಜಾರ್ಜ್ ಎಂ ವಿಕಾಫ್ ಹೇಳಿದ್ದಾರೆ.

ದಕ್ಷಿಣ ಚೀನಾ ಸಮುದ್ರದ 90% ನಷ್ಟು ಭಾಗವನ್ನು ಚೀನಾ ತನ್ನೆಂದು ಹೇಳಿಕೊಂಡಿದೆ, ಇದರ ಮೂಲಕ ಪ್ರತಿವರ್ಷ ಸುಮಾರು 3 ಟ್ರಿಲಿಯನ್ ವ್ಯಾಪಾರವು ಹಾದುಹೋಗುತ್ತದೆ. ಕಳೆದ ಒಂದು ದಶಕದಿಂದ ಚೀನಾ ಇಲ್ಲಿನ ಹಲವಾರು ಪ್ರದೇಶದಲ್ಲಿ ಮಾನವ ನಿರ್ಮಿತ ದ್ವೀಪಗಳನ್ನು ನಿರ್ಮಿಸಿ ಮಿಲಿಟರಿ ವಾಯುನೆಲೆಗಳು ಸೇರಿದಂತೆ ಸೇನಾ ನೆಲೆಗಳನ್ನು ಸ್ಥಾಪಿಸಲು ಮುಂದಾಗಿದೆ.

ಬ್ರೂನಿ, ಮಲೇಷ್ಯಾ, ಫಿಲಿಪೈನ್ಸ್, ತೈವಾನ್ ಮತ್ತು ವಿಯೆಟ್ನಾಂ ಕೂಡ ದಕ್ಷಿಣ ಚೀನಾ ಸಮುದ್ರದ ಕೆಲವು ಭಾಗಗಳಿಗೆ ತಮ್ಮದೆಂದು ವಾದಿಸುತ್ತಿದೆ.


ಓದಿ: ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆಂದ ಅಮೆರಿಕಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...