Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾ ಧ್ವಂಸ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದ ಬಳಿಕ ಬನ್‌ಭೂಲ್‌ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಿಂದ ದಿನದೂಡುತ್ತಿದ್ದಾರೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ. ಪೋಲಿಸರ ಬಗ್ಗೆ ಭಯದಿಂದ ಜನರು ತಮ್ಮ ಮನೆಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಅನಾಸ್ ಅವರ ಸಹೋದರ ಮೊಹಮ್ಮದ್ ಅಮನ್ ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ.  ಹಿಂಸಾಚಾರಕ್ಕೆ ಮೊದಲು ನಾನು ಮತ್ತು ತಂದೆ ಝಾಹಿದ್ ಹುಸೇನ್ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದೆವು. ಬಳಿಕ ನಾನು ಮನೆಗೆ ಮರಳಿದೆ. ಆದರೆ ತಂದೆ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಹಿಂಸಾಚಾರದ ಸುದ್ದಿ ಗೊತ್ತಾದಾಗ ಹೊರಗಿದ್ದ ಅನಸ್‌ಗೆ ಕರೆಮಾಡಿ ಮನೆಗೆ ಮರಳುವಂತೆ ಸೂಚಿಸಿದ್ದೆ. ನನ್ನ ಸ್ನೇಹಿತೆಯೋರ್ವಳು ಮಾರುಕಟ್ಟೆಯಲ್ಲಿರುವ ಮಾಹಿತಿ ತಿಳಿದು ಆಕೆಯನ್ನು ಹುಡುಕಲು ಹೋಗಿದ್ದೆ. ಬಳಿಕ ನನ್ನ ತಂದೆ ಮನೆಗೆ ಮರಳಿದ್ದರು. ಆದರೆ ಅನಾಸ್ ಇನ್ನೂ ಬಂದಿಲ್ಲ ಎಂದು ತಂದೆ ಆತನನ್ನು ಹುಡಕಲು ಹೋಗಿದ್ದಾರೆ. ನನ್ನ ತಂದೆ ಡೇರಿಯೊಂದರ ಬಳಿ ನಿಂತಿದ್ದಾಗ ಅವರ ಎದೆಗೆ ಗುಂಡು ಬಡಿದಿತ್ತು. ನೆರೆಯಾತ ನೀಡಿದ ಮಾಹಿತಿಯಂತೆ ನಾನು ಅಲ್ಲಿಗೆ ತೆರಳಿದಾಗ ತಂದೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಇತರ ಇಬ್ಬರ ನೆರವಿನಿಂದ ಅವರನ್ನು ಸ್ಥಳೀಯ ಕ್ಲಿನಿಕ್ ಗೆ ಸಾಗಿಸಿದ್ದೆ. ನೋಡಿದರೆ ಅನಾಸ್ ಸೊಂಟದ ಕೆಳಗೆ ಗುಂಡೇಟಿನಿಂದ ಗಾಯಗೊಂಡು ಅದಾಗಲೇ ಅಲ್ಲಿದ್ದ. ಇಬ್ಬರನ್ನೂ ಬೇರೆ ಕಡೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಅದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ, ಇದರಿಂದ ಕೆಲವೇ ಕ್ಷಣದಲ್ಲಿ ತಂದೆ ಮತ್ತು ಸಹೋದರ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಇಬ್ಬರ ಸಾವಿನ ಬಳಿಕ ಶುಕ್ರವಾರ ರಾತ್ರಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ದಫನ ಕಾರ್ಯ ಮಾಡಿದ್ದೇವೆ, ಈ ವೇಳೆ ನಮ್ಮ ಕುಟುಂಬದ ಕೇವಲ ಐವರಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು ಎಂದು ಅಮನ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಮೃತ ಫಹೀಮ್ ಖುರೇಷಿಯ ಸೋದರ ಸಂಬಂಧಿ ಜಾವೇದ್,  ಫಹೀಮ್ ಖುರೇಷಿಯನ್ನು ನೆರೆಹೊರೆಯವರೇ ಗುಂಡಿಕ್ಕಿ ಕೊಂದಿದ್ದಾರೆ. ಅವರು ಮನೆಯಲ್ಲಿದ್ದಾಗ ರಾತ್ರಿ 7.30ರ ಸುಮಾರಿಗೆ ಯಾರೋ ತಮ್ಮ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದರು. ಅದಕ್ಕೆ ಅವರು ವಿರೋಧಿಸಿದಾಗ ಅವರ ಮೆಲೆ ಗುಂಡಿನ ದಾಳಿ ನಡೆಸಲಾಗಿದೆ. ಬಳಿಕ ಫಹೀಮ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಫಹೀಂ ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಬನ್‌ಭೂಲ್‌ಪುರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿರುವ ಗೌಹರ್, ಹಿಂಸಾಚಾರದ ಸಮಯದಲ್ಲಿ ತನ್ನ ಮಗ ಆರಿಸ್ (18) ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕುಟುಂಬವು ಅವನನ್ನು ಬರೇಲಿಯ ಆಸ್ಪತ್ರೆಗೆ ಕರೆದೊಯ್ದಿದ್ದರಿಂದ ಜಿಲ್ಲಾಡಳಿತ ಹಿಂಸಾಚಾರದಲ್ಲಿ ಮೃತರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಮಗ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ಹಿಂಸಾಚಾರ ಪ್ರಾರಂಭವಾದಾಗ ನಾನು ಸಂಜೆ 5.45ರ ಸುಮಾರಿಗೆ ಅವರಿಗೆ ಕರೆ ಮಾಡಿ ಹಿಂತಿರುಗುವಂತೆ ಹೇಳಿದೆ. ಆದರೆ ಅವನು ಬಂದಿರಲಿಲ್ಲ, ಮತ್ತೆ 6.30ಕ್ಕೆ ಕರೆ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ. ನಾನು ಅವನನ್ನು ಹುಡುಕಲು ನಿರ್ಧರಿಸಿದೆ, ಹುಡುಕುತ್ತಿರುವಾಗ, ನನ್ನ ಮಗ ಚೌರಾಹಾದಲ್ಲಿ ಬಿದ್ದುಕೊಂಡಿದ್ದಾನೆ ಎಂದು ಯಾರೋ ಹೇಳಿದ್ದರು. ಇನ್ನಿಬ್ಬರ ಸಹಾಯದಿಂದ ನಾನು ಅವನನ್ನು ಮನೆಗೆ ಕರೆತಂದೆವು. ಹಿಂಸಾಚಾರದ ಹಿನ್ನೆಲೆ ಅವರನ್ನು ಬರೇಲಿಗೆ ಕರೆದೊಯ್ಯುತ್ತಿರುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಅವನು ನನ್ನ ಹಿರಿಯ ಮಗ, ನನ್ನ ಇಡೀ ಜಗತ್ತು ಆತ ಆಗಿದ್ದ ಎಂದು ಗೌಹರ್ ಹೇಳಿದ್ದಾರೆ.

ಏನಿದು ಘಟನೆ?

ಉತ್ತರಖಂಡದ ಹಲ್ದ್ವಾನಿ ಪುರಸಭೆಯು, ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು   ಕೆಡವಿದೆ. ಈ ಕುರಿತ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ ಮಸೀದಿಯನ್ನು ತುರ್ತಾಗಿ ಕೆಡವಲಾಗಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿತ್ತು. ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...