Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾ ಧ್ವಂಸ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದ ಬಳಿಕ ಬನ್‌ಭೂಲ್‌ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಿಂದ ದಿನದೂಡುತ್ತಿದ್ದಾರೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ. ಪೋಲಿಸರ ಬಗ್ಗೆ ಭಯದಿಂದ ಜನರು ತಮ್ಮ ಮನೆಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಅನಾಸ್ ಅವರ ಸಹೋದರ ಮೊಹಮ್ಮದ್ ಅಮನ್ ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ.  ಹಿಂಸಾಚಾರಕ್ಕೆ ಮೊದಲು ನಾನು ಮತ್ತು ತಂದೆ ಝಾಹಿದ್ ಹುಸೇನ್ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದೆವು. ಬಳಿಕ ನಾನು ಮನೆಗೆ ಮರಳಿದೆ. ಆದರೆ ತಂದೆ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಹಿಂಸಾಚಾರದ ಸುದ್ದಿ ಗೊತ್ತಾದಾಗ ಹೊರಗಿದ್ದ ಅನಸ್‌ಗೆ ಕರೆಮಾಡಿ ಮನೆಗೆ ಮರಳುವಂತೆ ಸೂಚಿಸಿದ್ದೆ. ನನ್ನ ಸ್ನೇಹಿತೆಯೋರ್ವಳು ಮಾರುಕಟ್ಟೆಯಲ್ಲಿರುವ ಮಾಹಿತಿ ತಿಳಿದು ಆಕೆಯನ್ನು ಹುಡುಕಲು ಹೋಗಿದ್ದೆ. ಬಳಿಕ ನನ್ನ ತಂದೆ ಮನೆಗೆ ಮರಳಿದ್ದರು. ಆದರೆ ಅನಾಸ್ ಇನ್ನೂ ಬಂದಿಲ್ಲ ಎಂದು ತಂದೆ ಆತನನ್ನು ಹುಡಕಲು ಹೋಗಿದ್ದಾರೆ. ನನ್ನ ತಂದೆ ಡೇರಿಯೊಂದರ ಬಳಿ ನಿಂತಿದ್ದಾಗ ಅವರ ಎದೆಗೆ ಗುಂಡು ಬಡಿದಿತ್ತು. ನೆರೆಯಾತ ನೀಡಿದ ಮಾಹಿತಿಯಂತೆ ನಾನು ಅಲ್ಲಿಗೆ ತೆರಳಿದಾಗ ತಂದೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಇತರ ಇಬ್ಬರ ನೆರವಿನಿಂದ ಅವರನ್ನು ಸ್ಥಳೀಯ ಕ್ಲಿನಿಕ್ ಗೆ ಸಾಗಿಸಿದ್ದೆ. ನೋಡಿದರೆ ಅನಾಸ್ ಸೊಂಟದ ಕೆಳಗೆ ಗುಂಡೇಟಿನಿಂದ ಗಾಯಗೊಂಡು ಅದಾಗಲೇ ಅಲ್ಲಿದ್ದ. ಇಬ್ಬರನ್ನೂ ಬೇರೆ ಕಡೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಅದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ, ಇದರಿಂದ ಕೆಲವೇ ಕ್ಷಣದಲ್ಲಿ ತಂದೆ ಮತ್ತು ಸಹೋದರ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಇಬ್ಬರ ಸಾವಿನ ಬಳಿಕ ಶುಕ್ರವಾರ ರಾತ್ರಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ದಫನ ಕಾರ್ಯ ಮಾಡಿದ್ದೇವೆ, ಈ ವೇಳೆ ನಮ್ಮ ಕುಟುಂಬದ ಕೇವಲ ಐವರಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು ಎಂದು ಅಮನ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಮೃತ ಫಹೀಮ್ ಖುರೇಷಿಯ ಸೋದರ ಸಂಬಂಧಿ ಜಾವೇದ್,  ಫಹೀಮ್ ಖುರೇಷಿಯನ್ನು ನೆರೆಹೊರೆಯವರೇ ಗುಂಡಿಕ್ಕಿ ಕೊಂದಿದ್ದಾರೆ. ಅವರು ಮನೆಯಲ್ಲಿದ್ದಾಗ ರಾತ್ರಿ 7.30ರ ಸುಮಾರಿಗೆ ಯಾರೋ ತಮ್ಮ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದರು. ಅದಕ್ಕೆ ಅವರು ವಿರೋಧಿಸಿದಾಗ ಅವರ ಮೆಲೆ ಗುಂಡಿನ ದಾಳಿ ನಡೆಸಲಾಗಿದೆ. ಬಳಿಕ ಫಹೀಮ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಫಹೀಂ ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಬನ್‌ಭೂಲ್‌ಪುರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿರುವ ಗೌಹರ್, ಹಿಂಸಾಚಾರದ ಸಮಯದಲ್ಲಿ ತನ್ನ ಮಗ ಆರಿಸ್ (18) ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕುಟುಂಬವು ಅವನನ್ನು ಬರೇಲಿಯ ಆಸ್ಪತ್ರೆಗೆ ಕರೆದೊಯ್ದಿದ್ದರಿಂದ ಜಿಲ್ಲಾಡಳಿತ ಹಿಂಸಾಚಾರದಲ್ಲಿ ಮೃತರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಮಗ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ಹಿಂಸಾಚಾರ ಪ್ರಾರಂಭವಾದಾಗ ನಾನು ಸಂಜೆ 5.45ರ ಸುಮಾರಿಗೆ ಅವರಿಗೆ ಕರೆ ಮಾಡಿ ಹಿಂತಿರುಗುವಂತೆ ಹೇಳಿದೆ. ಆದರೆ ಅವನು ಬಂದಿರಲಿಲ್ಲ, ಮತ್ತೆ 6.30ಕ್ಕೆ ಕರೆ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ. ನಾನು ಅವನನ್ನು ಹುಡುಕಲು ನಿರ್ಧರಿಸಿದೆ, ಹುಡುಕುತ್ತಿರುವಾಗ, ನನ್ನ ಮಗ ಚೌರಾಹಾದಲ್ಲಿ ಬಿದ್ದುಕೊಂಡಿದ್ದಾನೆ ಎಂದು ಯಾರೋ ಹೇಳಿದ್ದರು. ಇನ್ನಿಬ್ಬರ ಸಹಾಯದಿಂದ ನಾನು ಅವನನ್ನು ಮನೆಗೆ ಕರೆತಂದೆವು. ಹಿಂಸಾಚಾರದ ಹಿನ್ನೆಲೆ ಅವರನ್ನು ಬರೇಲಿಗೆ ಕರೆದೊಯ್ಯುತ್ತಿರುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಅವನು ನನ್ನ ಹಿರಿಯ ಮಗ, ನನ್ನ ಇಡೀ ಜಗತ್ತು ಆತ ಆಗಿದ್ದ ಎಂದು ಗೌಹರ್ ಹೇಳಿದ್ದಾರೆ.

ಏನಿದು ಘಟನೆ?

ಉತ್ತರಖಂಡದ ಹಲ್ದ್ವಾನಿ ಪುರಸಭೆಯು, ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು   ಕೆಡವಿದೆ. ಈ ಕುರಿತ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ ಮಸೀದಿಯನ್ನು ತುರ್ತಾಗಿ ಕೆಡವಲಾಗಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿತ್ತು. ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...