Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾ ಧ್ವಂಸ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದ ಬಳಿಕ ಬನ್‌ಭೂಲ್‌ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಿಂದ ದಿನದೂಡುತ್ತಿದ್ದಾರೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ. ಪೋಲಿಸರ ಬಗ್ಗೆ ಭಯದಿಂದ ಜನರು ತಮ್ಮ ಮನೆಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಅನಾಸ್ ಅವರ ಸಹೋದರ ಮೊಹಮ್ಮದ್ ಅಮನ್ ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ.  ಹಿಂಸಾಚಾರಕ್ಕೆ ಮೊದಲು ನಾನು ಮತ್ತು ತಂದೆ ಝಾಹಿದ್ ಹುಸೇನ್ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದೆವು. ಬಳಿಕ ನಾನು ಮನೆಗೆ ಮರಳಿದೆ. ಆದರೆ ತಂದೆ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಹಿಂಸಾಚಾರದ ಸುದ್ದಿ ಗೊತ್ತಾದಾಗ ಹೊರಗಿದ್ದ ಅನಸ್‌ಗೆ ಕರೆಮಾಡಿ ಮನೆಗೆ ಮರಳುವಂತೆ ಸೂಚಿಸಿದ್ದೆ. ನನ್ನ ಸ್ನೇಹಿತೆಯೋರ್ವಳು ಮಾರುಕಟ್ಟೆಯಲ್ಲಿರುವ ಮಾಹಿತಿ ತಿಳಿದು ಆಕೆಯನ್ನು ಹುಡುಕಲು ಹೋಗಿದ್ದೆ. ಬಳಿಕ ನನ್ನ ತಂದೆ ಮನೆಗೆ ಮರಳಿದ್ದರು. ಆದರೆ ಅನಾಸ್ ಇನ್ನೂ ಬಂದಿಲ್ಲ ಎಂದು ತಂದೆ ಆತನನ್ನು ಹುಡಕಲು ಹೋಗಿದ್ದಾರೆ. ನನ್ನ ತಂದೆ ಡೇರಿಯೊಂದರ ಬಳಿ ನಿಂತಿದ್ದಾಗ ಅವರ ಎದೆಗೆ ಗುಂಡು ಬಡಿದಿತ್ತು. ನೆರೆಯಾತ ನೀಡಿದ ಮಾಹಿತಿಯಂತೆ ನಾನು ಅಲ್ಲಿಗೆ ತೆರಳಿದಾಗ ತಂದೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಇತರ ಇಬ್ಬರ ನೆರವಿನಿಂದ ಅವರನ್ನು ಸ್ಥಳೀಯ ಕ್ಲಿನಿಕ್ ಗೆ ಸಾಗಿಸಿದ್ದೆ. ನೋಡಿದರೆ ಅನಾಸ್ ಸೊಂಟದ ಕೆಳಗೆ ಗುಂಡೇಟಿನಿಂದ ಗಾಯಗೊಂಡು ಅದಾಗಲೇ ಅಲ್ಲಿದ್ದ. ಇಬ್ಬರನ್ನೂ ಬೇರೆ ಕಡೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಅದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ, ಇದರಿಂದ ಕೆಲವೇ ಕ್ಷಣದಲ್ಲಿ ತಂದೆ ಮತ್ತು ಸಹೋದರ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಇಬ್ಬರ ಸಾವಿನ ಬಳಿಕ ಶುಕ್ರವಾರ ರಾತ್ರಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ದಫನ ಕಾರ್ಯ ಮಾಡಿದ್ದೇವೆ, ಈ ವೇಳೆ ನಮ್ಮ ಕುಟುಂಬದ ಕೇವಲ ಐವರಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು ಎಂದು ಅಮನ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಮೃತ ಫಹೀಮ್ ಖುರೇಷಿಯ ಸೋದರ ಸಂಬಂಧಿ ಜಾವೇದ್,  ಫಹೀಮ್ ಖುರೇಷಿಯನ್ನು ನೆರೆಹೊರೆಯವರೇ ಗುಂಡಿಕ್ಕಿ ಕೊಂದಿದ್ದಾರೆ. ಅವರು ಮನೆಯಲ್ಲಿದ್ದಾಗ ರಾತ್ರಿ 7.30ರ ಸುಮಾರಿಗೆ ಯಾರೋ ತಮ್ಮ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದರು. ಅದಕ್ಕೆ ಅವರು ವಿರೋಧಿಸಿದಾಗ ಅವರ ಮೆಲೆ ಗುಂಡಿನ ದಾಳಿ ನಡೆಸಲಾಗಿದೆ. ಬಳಿಕ ಫಹೀಮ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಫಹೀಂ ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಬನ್‌ಭೂಲ್‌ಪುರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿರುವ ಗೌಹರ್, ಹಿಂಸಾಚಾರದ ಸಮಯದಲ್ಲಿ ತನ್ನ ಮಗ ಆರಿಸ್ (18) ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕುಟುಂಬವು ಅವನನ್ನು ಬರೇಲಿಯ ಆಸ್ಪತ್ರೆಗೆ ಕರೆದೊಯ್ದಿದ್ದರಿಂದ ಜಿಲ್ಲಾಡಳಿತ ಹಿಂಸಾಚಾರದಲ್ಲಿ ಮೃತರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಮಗ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ಹಿಂಸಾಚಾರ ಪ್ರಾರಂಭವಾದಾಗ ನಾನು ಸಂಜೆ 5.45ರ ಸುಮಾರಿಗೆ ಅವರಿಗೆ ಕರೆ ಮಾಡಿ ಹಿಂತಿರುಗುವಂತೆ ಹೇಳಿದೆ. ಆದರೆ ಅವನು ಬಂದಿರಲಿಲ್ಲ, ಮತ್ತೆ 6.30ಕ್ಕೆ ಕರೆ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ. ನಾನು ಅವನನ್ನು ಹುಡುಕಲು ನಿರ್ಧರಿಸಿದೆ, ಹುಡುಕುತ್ತಿರುವಾಗ, ನನ್ನ ಮಗ ಚೌರಾಹಾದಲ್ಲಿ ಬಿದ್ದುಕೊಂಡಿದ್ದಾನೆ ಎಂದು ಯಾರೋ ಹೇಳಿದ್ದರು. ಇನ್ನಿಬ್ಬರ ಸಹಾಯದಿಂದ ನಾನು ಅವನನ್ನು ಮನೆಗೆ ಕರೆತಂದೆವು. ಹಿಂಸಾಚಾರದ ಹಿನ್ನೆಲೆ ಅವರನ್ನು ಬರೇಲಿಗೆ ಕರೆದೊಯ್ಯುತ್ತಿರುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಅವನು ನನ್ನ ಹಿರಿಯ ಮಗ, ನನ್ನ ಇಡೀ ಜಗತ್ತು ಆತ ಆಗಿದ್ದ ಎಂದು ಗೌಹರ್ ಹೇಳಿದ್ದಾರೆ.

ಏನಿದು ಘಟನೆ?

ಉತ್ತರಖಂಡದ ಹಲ್ದ್ವಾನಿ ಪುರಸಭೆಯು, ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು   ಕೆಡವಿದೆ. ಈ ಕುರಿತ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ ಮಸೀದಿಯನ್ನು ತುರ್ತಾಗಿ ಕೆಡವಲಾಗಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿತ್ತು. ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...