Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...