Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...