Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...