Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...