Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...