Homeಕರ್ನಾಟಕಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಪ್ರತಿಭಟನೆಯ ನೆಪದಲ್ಲಿ ತಲಾ 20 ರಿಂದ 25 ಜನ ಅಪರಿಚಿತರ ಮೇಲೆ ಎಫ್‌ಐಆರ್‌‌

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕರ್‌ ಟೋಲ್‌‌ಗೇಟ್‌‌ ವಿರೋಧಿ ಹೋರಾಟಗಾರರ ಮೇಲೆ ಮಂಗಳೂರಿನ ಸುರತ್ಕಲ್ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆ ಹಿನ್ನಲೆ ತಲಾ 20 ರಿಂದ 25 ಜನ ಅಪರಿಚಿತರ ವಿರುದ್ಧ ಎರಡು FIR ದಾಖಲಾಗಿದೆ.

ಸುಮಾರು ಆರು ವರ್ಷಗಳಿಂದಲೂ ಟೋಲ್‌ಗೇಟ್‌‌ ವಿರೋಧಿ ಚಳವಳಿ ನಡೆಯುತ್ತಿದೆ. ಈ ನಡುವೆ ಕರಾವಳಿಯ ಎಲ್ಲಾ ಬಿಜೆಪಿಯೇತರ ಪಕ್ಷ-ಸಂಘಟನೆಗಳನ್ನು ಸಂಘಟಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್‌ 18 ರ ಮಂಗಳವಾರ ಸುರತ್ಕಲ್‌ನಲ್ಲಿ ಭಾರಿ ಹೋರಾಟವನ್ನು ಸಂಘಟಿಸಿತ್ತು. ಈ ವೇಳೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ವೇಳೆ ಟೋಲ್ ವಿರೋಧಿ ಸಮಿತಿ ಸಂಚಾಲಕ ಹಾಗೂ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿ.ಕೆ. ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಗುರುವಾರ ಹೋರಾಟಗಾರರ ಮೇಲೆ ದಾಖಲಾದ ಎಫ್‌ಐಆ‌‌ರ್‌‌ನಲ್ಲಿ ಎರಡೂ ದೂರು ಒಂದೆ ತರ ಇದೆ ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ. ಒಂದು ದೂರನ್ನು ಟೋಲ್‌ಗೇಟ್‌‌ ಗುತ್ತಿಗೆ ಕಂಟ್ರಾಕ್ಟರ್ ನೂರ್ ಮಹಮ್ಮದ್ ಕಂಪೆನಿಯಿಂದ ದಾಖಲಾಗಿದ್ದ, ಎರಡನೇ ದೂರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಲಿಂಗೇಗೌಡ ಅವರು ನೀಡಿದ್ದಾರೆ ಎಂದು ಮುನೀರ್‌ ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರತಿಭಟನಾಕಾರರು ಹೆದ್ದಾರಿ ಸಂಚಾರಕ್ಕೆ ತೊಡಕು ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದು, “ತಲಾ 20 ರಿಂದ 25 ಜನ ಗುರುತಿಲ್ಲದವರು ಎಂದು ಯಾರ ಹೆಸರೂ ಉಲ್ಲೇಖಿಸದೆ ದೂರು ನೀಡಲಾಗಿದೆ” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಒಂದು ಘಟನೆಗೆ ಒಂದೇ FIR ಹಾಕುವುದಲ್ಲವೆ? ಎರಡು ಯಾಕೆ ಎಂದು ಪ್ರಶ್ನಿಸಿರುವ ಮುನೀರ್‌ ಕಾಟಿಪಳ್ಳ,“ಇದನ್ನು ಯಾಕೆ ಎಂದು ಕೇಳಬೇಡಿ. ಇದು ಡಬ್ಬಲ್ ಇಂಜಿನ್ ಬಿಜೆಪಿ ಸರಕಾರ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ಯಾವುದೇ ಅಶಾಂತಿ, ಆಸ್ತಿಪಾಸ್ತಿ ಹಾನಿಗೆ ಅವಕಾಶ ನೀಡದ ತುಳುನಾಡಿನ ಮಾದರಿ ಹೋರಾಟವೊಂದನ್ನು ನಿರ್ದಯವಾಗಿ ಅಕ್ರಮದಾರಿಯಲ್ಲಿ ಹತ್ತಿಕ್ಕಲು ನೋಡುತ್ತಿದ್ದೀರಿ. ಪೊಲೀಸ್ ಕೇಸುಗಳ ಮೂಲಕ ಹೋರಾಟವನ್ನು ಮುಗಿಸಿ ಬಿಡುತ್ತೀವಿ ಅನ್ನುವುದು ನಿಮ್ಮ ಭ್ರಮೆ. ಕೆಟ್ಟ ಟ್ರೋಲು, ಪೊಲೀಸ್ ಕೇಸು ಒಟ್ಟೊಟ್ಟಿಗೆ ಆರಂಭ ಆಗಿದೆ. ಅಂದರೆ ಚಿತ್ರಕತೆ ಒಂದೇ ಕಡೆ ಸಿದ್ದಗೊಳ್ಳುತ್ತಿದೆ ಅಂತಾಯ್ತು. ಟೋಲ್ ಮುಚ್ಚಿ ಅಂದರೆ ನಮ್ಮ ಬಾಯಿ ಮುಚ್ಚಿಸುತ್ತಿದ್ದೀರಿ. ಇದು ಅಸಾಧ್ಯ. ಇದು ಖಂಡನಾರ್ಹ” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದು ಹೋರಾಟ ಸಮಿತಿ ಜೊತೆ ನಿಂತಿರುವ ತುಳುನಾಡಿನ ಸಮಸ್ತ ಜನಸಮೂಹದ ಮೇಲೆ ಹಾಕಿರುವ FIR ಎಂದು ಹೇಳಿರುವ ಮುನೀರ್‌ ಕಾಟಿಪಳ್ಳ, “ತುಳುನಾಡಿನ ಬೆಂಬಲದೊಂದಿಗೆ ಇದನ್ನು ಎದುರಿಸುತ್ತೇವೆ. ನಾವು ಪೊಲೀಸ್ ವಶದಿಂದ ಹೊರಬಂದ ತರುವಾಯ ದೂರು ಬರೆಸಿಕೊಂಡಿದ್ದೀರಿ. ಇದು ಹೇಡಿತನ, ವಂಚಕತನ. ಟೋಲ್ ತೆರವಿನವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

ಎರಡು ಪ್ರತ್ಯೇಕ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ,“ಟೋಲ್‌ಗೇಟ್ ಹೂರಾಟಗಾರರ ವಿರುದ್ಧ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. 20 ರಿಂದ 25 ಮಂದಿ ರಸ್ತೆ ತಡೆ ಮಾಡಿದ್ದಾರೆ ಎಂಬ ಆರೋಪ. ಯಾರದೇ ಹೆಸರು ನೀಡಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೂರಿನ ವಿರುದ್ಧ ಕಾನೂನಾತ್ಮಕ ಮತ್ತು ಹೋರಾಟದ ಕ್ರಮಗಳನ್ನು ಹೋರಾಟ ಸಮಿತಿ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಈ ನಡುವೆ ಹೋರಾಟ ಸಮಿತಿಯು ಅಕ್ಟೋಬರ್ 28 ರಿಂದ ಟೋಲ್‌‌ಗೇಟ್‌ ವಿರೋಧಿ ಹೋರಾಟವನ್ನು ಮತ್ತಷ್ಟು ಬಲಗೊಳಿಸಲು ತೀರ್ಮಾನಿಸಿದ್ದು, ಟೋಲ್‌ಗೇಟ್‌ ತೆರವುಗೊಳ್ಳುವವರೆಗೆ ನಿರಂತರ ಹಗಲು-ರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...