Homeಮುಖಪುಟಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

- Advertisement -
- Advertisement -

ಹದಿನೈದು ದಿನಗಳ ಹಿಂದೆ ಆಂಧ್ರಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದಾಳೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಹಿಂದೂಸ್ಥಾನ್ ಟೈಮ್ಸ್‌’ ವರದಿ ಮಾಡಿದೆ.

ಮಾರ್ಚ್ 16 ರಂದು ಶಿಶು ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ; ಪುಣೆ ಮೂಲದ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಮಾರ್ಚ್ 24 ರಂದು ಆಕೆಯ ಮಾದರಿಯನ್ನು ಪರೀಕ್ಷಿಸಿದ ನಂತರ, ಬಾಲಕಿಗೆ ಹಕ್ಕಿ ಜ್ವರ ಬಂದಿದೆ ಎಂದು ದೃಢಪಡಿಸಿದೆ. ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾದರಿಗಳ ಪರೀಕ್ಷೆಯಿಂದ ಹಕ್ಕಿ ಜ್ವರವನ್ನು ದೃಢಪಡಿಸಿದೆ ಎಂದು ಅಧಿಕಾರಿ ಹೇಳಿದರು.

“ಏಮ್ಸ್-ಮಂಗಳಗಿರಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದಾಳೆ” ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೂ, ಮಗುವಿನ ಕುಟುಂಬ ಸದಸ್ಯರಿಗೆ ಹಕ್ಕಿ ಜ್ವರ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದಾಗ, ಫೆಬ್ರವರಿ 26 ರಂದು ಬಾಲಕಿ ಹಸಿ ಕೋಳಿಯ ಸಣ್ಣ ತುಂಡನ್ನು ತಿಂದಿದ್ದಾಳೆ ಎಂದು ದೃಢೀಕರಣ ಸಿಕ್ಕಿದೆ. ಇದು ರೋಗ ಹರಡಲು ಸಂಭವನೀಯ ಕಾರಣ ಎನ್ನಲಾಗಿದೆ. ಕುಟುಂಬ ಸದಸ್ಯರು ಹೇಳುವಂತೆ, ಹುಡುಗಿ ಒಂದು ಅಥವಾ ಎರಡು ತುಂಡು ಹಸಿ ಕೋಳಿ ಮಾಂಸವನ್ನು ತಿನ್ನುತ್ತಿದ್ದಳು. ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಆಕೆ ಒಂದು ತುಂಡು ಸೇವಿಸಿದ್ದಳು.

ಫೆಬ್ರವರಿ 28 ರಂದು ಅವಳಿಗೆ ಜ್ವರ ಮತ್ತು ಇತರ ಲಕ್ಷಣಗಳು ಕಾಣಿಸಿಕೊಂಡವು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರ್ಚ್ 4 ರಂದು, ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡ ನಂತರ ಅವಳನ್ನು ಏಮ್ಸ್- ಮಂಗಳಗಿರಿಗೆ ದಾಖಲಿಸಲಾಯಿತು.

ಪಲ್ನಾಡು ಜಿಲ್ಲೆಯ ನರಸಾಪೇಟ್ ಪಟ್ಟಣದ ಬಲಿಯಾ ನಗರದಲ್ಲಿ ಹುಡುಗಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು; ತಂದೆ ಬ್ಯಾಂಕ್ ರಿಕವರಿ ಏಜೆಂಟ್ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. ಕುಟುಂಬದ ಎಲ್ಲ ಸದಸ್ಯರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವರ ದೇಃದಲ್ಲಿ ಪಕ್ಷಿ ನೆಗೆಟಿವ್ ವರದಿ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ನಿರ್ದೇಶಕ ಡಾ. ಟಿ. ದಾಮೋದರ್ ನಾಯ್ಡು, ಪಲ್ನಾಡು ಮತ್ತು ನೆರೆಯ ಜಿಲ್ಲೆಗಳಿಂದ ಯಾವುದೇ ಹಕ್ಕಿ ಜ್ವರದ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. “ನಾವು ಈ ಪ್ರದೇಶದ ಎಲ್ಲ ಕೋಳಿ ಸಾಕಣೆ ಕೇಂದ್ರಗಳ ಭೌತಿಕ ಕಣ್ಗಾವಲು ನಡೆಸಿದ್ದೇವೆ. ಕೋಳಿಗಳಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ಅವರು ಹೇಳಿದರು.

“ಹಸಿ ಕೋಳಿ ಮಾಂಸವನ್ನು ತಿಂದ ನಂತರ ಹುಡುಗಿಗೆ ಹಕ್ಕಿ ಜ್ವರ ಬಂದಿರಬಹುದು. ಆದರೆ, ಕುಟುಂಬವು ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಿತ್ತು” ಎಂದು ಡಾ. ನಾಯ್ಡು ಹೇಳಿದರು. “60-70 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಹಕ್ಕಿ ಜ್ವರ ವೈರಸ್ ಬದುಕುಳಿಯುವುದಿಲ್ಲವಾದ್ದರಿಂದ, ಚೆನ್ನಾಗಿ ಬೇಯಿಸಿದ ನಂತರ ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ನಾವು ಜನರಿಗೆ ಸಲಹೆ ನೀಡುತ್ತೇವೆ” ಎಂದು ಅವರು ಹೇಳಿದರು.

ಜನರ ಹಿತದೃಷ್ಟಿಯಿಂದ ಮಾತುಕತೆಗೆ ಸಿದ್ದ: ಸಿಪಿಎಂ (ಮಾವೋವಾದಿ) ಕೇಂದ್ರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...