Homeಮುಖಪುಟಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

- Advertisement -
- Advertisement -

ಹದಿನೈದು ದಿನಗಳ ಹಿಂದೆ ಆಂಧ್ರಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದಾಳೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಹಿಂದೂಸ್ಥಾನ್ ಟೈಮ್ಸ್‌’ ವರದಿ ಮಾಡಿದೆ.

ಮಾರ್ಚ್ 16 ರಂದು ಶಿಶು ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ; ಪುಣೆ ಮೂಲದ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಮಾರ್ಚ್ 24 ರಂದು ಆಕೆಯ ಮಾದರಿಯನ್ನು ಪರೀಕ್ಷಿಸಿದ ನಂತರ, ಬಾಲಕಿಗೆ ಹಕ್ಕಿ ಜ್ವರ ಬಂದಿದೆ ಎಂದು ದೃಢಪಡಿಸಿದೆ. ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾದರಿಗಳ ಪರೀಕ್ಷೆಯಿಂದ ಹಕ್ಕಿ ಜ್ವರವನ್ನು ದೃಢಪಡಿಸಿದೆ ಎಂದು ಅಧಿಕಾರಿ ಹೇಳಿದರು.

“ಏಮ್ಸ್-ಮಂಗಳಗಿರಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದಾಳೆ” ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೂ, ಮಗುವಿನ ಕುಟುಂಬ ಸದಸ್ಯರಿಗೆ ಹಕ್ಕಿ ಜ್ವರ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದಾಗ, ಫೆಬ್ರವರಿ 26 ರಂದು ಬಾಲಕಿ ಹಸಿ ಕೋಳಿಯ ಸಣ್ಣ ತುಂಡನ್ನು ತಿಂದಿದ್ದಾಳೆ ಎಂದು ದೃಢೀಕರಣ ಸಿಕ್ಕಿದೆ. ಇದು ರೋಗ ಹರಡಲು ಸಂಭವನೀಯ ಕಾರಣ ಎನ್ನಲಾಗಿದೆ. ಕುಟುಂಬ ಸದಸ್ಯರು ಹೇಳುವಂತೆ, ಹುಡುಗಿ ಒಂದು ಅಥವಾ ಎರಡು ತುಂಡು ಹಸಿ ಕೋಳಿ ಮಾಂಸವನ್ನು ತಿನ್ನುತ್ತಿದ್ದಳು. ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಆಕೆ ಒಂದು ತುಂಡು ಸೇವಿಸಿದ್ದಳು.

ಫೆಬ್ರವರಿ 28 ರಂದು ಅವಳಿಗೆ ಜ್ವರ ಮತ್ತು ಇತರ ಲಕ್ಷಣಗಳು ಕಾಣಿಸಿಕೊಂಡವು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರ್ಚ್ 4 ರಂದು, ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡ ನಂತರ ಅವಳನ್ನು ಏಮ್ಸ್- ಮಂಗಳಗಿರಿಗೆ ದಾಖಲಿಸಲಾಯಿತು.

ಪಲ್ನಾಡು ಜಿಲ್ಲೆಯ ನರಸಾಪೇಟ್ ಪಟ್ಟಣದ ಬಲಿಯಾ ನಗರದಲ್ಲಿ ಹುಡುಗಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು; ತಂದೆ ಬ್ಯಾಂಕ್ ರಿಕವರಿ ಏಜೆಂಟ್ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. ಕುಟುಂಬದ ಎಲ್ಲ ಸದಸ್ಯರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವರ ದೇಃದಲ್ಲಿ ಪಕ್ಷಿ ನೆಗೆಟಿವ್ ವರದಿ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ನಿರ್ದೇಶಕ ಡಾ. ಟಿ. ದಾಮೋದರ್ ನಾಯ್ಡು, ಪಲ್ನಾಡು ಮತ್ತು ನೆರೆಯ ಜಿಲ್ಲೆಗಳಿಂದ ಯಾವುದೇ ಹಕ್ಕಿ ಜ್ವರದ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. “ನಾವು ಈ ಪ್ರದೇಶದ ಎಲ್ಲ ಕೋಳಿ ಸಾಕಣೆ ಕೇಂದ್ರಗಳ ಭೌತಿಕ ಕಣ್ಗಾವಲು ನಡೆಸಿದ್ದೇವೆ. ಕೋಳಿಗಳಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ಅವರು ಹೇಳಿದರು.

“ಹಸಿ ಕೋಳಿ ಮಾಂಸವನ್ನು ತಿಂದ ನಂತರ ಹುಡುಗಿಗೆ ಹಕ್ಕಿ ಜ್ವರ ಬಂದಿರಬಹುದು. ಆದರೆ, ಕುಟುಂಬವು ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಿತ್ತು” ಎಂದು ಡಾ. ನಾಯ್ಡು ಹೇಳಿದರು. “60-70 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಹಕ್ಕಿ ಜ್ವರ ವೈರಸ್ ಬದುಕುಳಿಯುವುದಿಲ್ಲವಾದ್ದರಿಂದ, ಚೆನ್ನಾಗಿ ಬೇಯಿಸಿದ ನಂತರ ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ನಾವು ಜನರಿಗೆ ಸಲಹೆ ನೀಡುತ್ತೇವೆ” ಎಂದು ಅವರು ಹೇಳಿದರು.

ಜನರ ಹಿತದೃಷ್ಟಿಯಿಂದ ಮಾತುಕತೆಗೆ ಸಿದ್ದ: ಸಿಪಿಎಂ (ಮಾವೋವಾದಿ) ಕೇಂದ್ರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...