Homeಮುಖಪುಟಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

- Advertisement -
- Advertisement -

ಹದಿನೈದು ದಿನಗಳ ಹಿಂದೆ ಆಂಧ್ರಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದಾಳೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಹಿಂದೂಸ್ಥಾನ್ ಟೈಮ್ಸ್‌’ ವರದಿ ಮಾಡಿದೆ.

ಮಾರ್ಚ್ 16 ರಂದು ಶಿಶು ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ; ಪುಣೆ ಮೂಲದ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಮಾರ್ಚ್ 24 ರಂದು ಆಕೆಯ ಮಾದರಿಯನ್ನು ಪರೀಕ್ಷಿಸಿದ ನಂತರ, ಬಾಲಕಿಗೆ ಹಕ್ಕಿ ಜ್ವರ ಬಂದಿದೆ ಎಂದು ದೃಢಪಡಿಸಿದೆ. ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾದರಿಗಳ ಪರೀಕ್ಷೆಯಿಂದ ಹಕ್ಕಿ ಜ್ವರವನ್ನು ದೃಢಪಡಿಸಿದೆ ಎಂದು ಅಧಿಕಾರಿ ಹೇಳಿದರು.

“ಏಮ್ಸ್-ಮಂಗಳಗಿರಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದಾಳೆ” ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೂ, ಮಗುವಿನ ಕುಟುಂಬ ಸದಸ್ಯರಿಗೆ ಹಕ್ಕಿ ಜ್ವರ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದಾಗ, ಫೆಬ್ರವರಿ 26 ರಂದು ಬಾಲಕಿ ಹಸಿ ಕೋಳಿಯ ಸಣ್ಣ ತುಂಡನ್ನು ತಿಂದಿದ್ದಾಳೆ ಎಂದು ದೃಢೀಕರಣ ಸಿಕ್ಕಿದೆ. ಇದು ರೋಗ ಹರಡಲು ಸಂಭವನೀಯ ಕಾರಣ ಎನ್ನಲಾಗಿದೆ. ಕುಟುಂಬ ಸದಸ್ಯರು ಹೇಳುವಂತೆ, ಹುಡುಗಿ ಒಂದು ಅಥವಾ ಎರಡು ತುಂಡು ಹಸಿ ಕೋಳಿ ಮಾಂಸವನ್ನು ತಿನ್ನುತ್ತಿದ್ದಳು. ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಆಕೆ ಒಂದು ತುಂಡು ಸೇವಿಸಿದ್ದಳು.

ಫೆಬ್ರವರಿ 28 ರಂದು ಅವಳಿಗೆ ಜ್ವರ ಮತ್ತು ಇತರ ಲಕ್ಷಣಗಳು ಕಾಣಿಸಿಕೊಂಡವು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರ್ಚ್ 4 ರಂದು, ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡ ನಂತರ ಅವಳನ್ನು ಏಮ್ಸ್- ಮಂಗಳಗಿರಿಗೆ ದಾಖಲಿಸಲಾಯಿತು.

ಪಲ್ನಾಡು ಜಿಲ್ಲೆಯ ನರಸಾಪೇಟ್ ಪಟ್ಟಣದ ಬಲಿಯಾ ನಗರದಲ್ಲಿ ಹುಡುಗಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು; ತಂದೆ ಬ್ಯಾಂಕ್ ರಿಕವರಿ ಏಜೆಂಟ್ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. ಕುಟುಂಬದ ಎಲ್ಲ ಸದಸ್ಯರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವರ ದೇಃದಲ್ಲಿ ಪಕ್ಷಿ ನೆಗೆಟಿವ್ ವರದಿ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ನಿರ್ದೇಶಕ ಡಾ. ಟಿ. ದಾಮೋದರ್ ನಾಯ್ಡು, ಪಲ್ನಾಡು ಮತ್ತು ನೆರೆಯ ಜಿಲ್ಲೆಗಳಿಂದ ಯಾವುದೇ ಹಕ್ಕಿ ಜ್ವರದ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. “ನಾವು ಈ ಪ್ರದೇಶದ ಎಲ್ಲ ಕೋಳಿ ಸಾಕಣೆ ಕೇಂದ್ರಗಳ ಭೌತಿಕ ಕಣ್ಗಾವಲು ನಡೆಸಿದ್ದೇವೆ. ಕೋಳಿಗಳಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ಅವರು ಹೇಳಿದರು.

“ಹಸಿ ಕೋಳಿ ಮಾಂಸವನ್ನು ತಿಂದ ನಂತರ ಹುಡುಗಿಗೆ ಹಕ್ಕಿ ಜ್ವರ ಬಂದಿರಬಹುದು. ಆದರೆ, ಕುಟುಂಬವು ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಿತ್ತು” ಎಂದು ಡಾ. ನಾಯ್ಡು ಹೇಳಿದರು. “60-70 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಹಕ್ಕಿ ಜ್ವರ ವೈರಸ್ ಬದುಕುಳಿಯುವುದಿಲ್ಲವಾದ್ದರಿಂದ, ಚೆನ್ನಾಗಿ ಬೇಯಿಸಿದ ನಂತರ ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ನಾವು ಜನರಿಗೆ ಸಲಹೆ ನೀಡುತ್ತೇವೆ” ಎಂದು ಅವರು ಹೇಳಿದರು.

ಜನರ ಹಿತದೃಷ್ಟಿಯಿಂದ ಮಾತುಕತೆಗೆ ಸಿದ್ದ: ಸಿಪಿಎಂ (ಮಾವೋವಾದಿ) ಕೇಂದ್ರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...