Homeರಾಷ್ಟ್ರೀಯಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

ಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರಾರಂಭಿಸಿದ ಐತಿಹಾಸಿಕ ಹೋರಾಟಕ್ಕೆ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ರೈತ ಸಂಘಗಳು ಶನಿವಾರ ದೇಶಾದ್ಯಂತ ರಾಜಭವನಗಳಿಗೆ ಮೆರವಣಿಗೆಗಳನ್ನು ನಡೆಸಲಿವೆ. ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಸಿದ ಸುಮಾರು ಒಂದು ವರ್ಷದ ದೀರ್ಘ ಹೋರಾಟದ ನಂತರ ಬಿಜೆಪಿ ಸರ್ಕಾರ ರೈತರ ಮುಂದೆ ಮಂಡಿಯೂರಿ ಸೋಲೊಪ್ಪಿಕೊಂಡಿತ್ತು.

ಸರ್ಕಾರ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸದ ಕಾರಣ ಅದರ ವಿರುದ್ಧ ಕೂಡಾ ರೈತರ ಪ್ರತಿಭಟನೆಯಲ್ಲಿ ದಾಖಲಿಸಲಾಗುವುದು ಎಂದು ರೈತ ಮುಖಂಡರು ಶುಕ್ರವಾರ ಹೇಳಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಚರ್ಚೆ ನಡೆಸಿ ಕಾನೂನು ತರುವುದಾಗಿ ಸರಕಾರ ಲಿಖಿತವಾಗಿ ಹೇಳಿಕೊಂಡಿದ್ದರೂ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ರೈತ ಮುಖಂಡರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೇಶದಾದ್ಯಂತದ ಲಕ್ಷಾಂತರ ರೈತರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

“ನಮ್ಮ ಹಲವು ಬೇಡಿಕೆಗಳಿಗೆ ಲಿಖಿತವಾಗಿ ಒಪ್ಪಿಗೆ ನೀಡಿದರೂ ಏನೂ ಆಗಿಲ್ಲ. ಇದು ದೇಶದ ರೈತರಿಗೆ ಮೋಸ ಮಾಡಿದ ದೇಶದ್ರೋಹಿ ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರವು ಕಾರ್ಪೊರೇಟ್‌ಗಳನ್ನು ರಕ್ಷಿಸುತ್ತಿದೆ… ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶವೇ ಇಲ್ಲ ಎಂದು ಸಾಬೀತುಪಡಿಸಿದ್ದಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಹನ್ನನ್ ಮೊಲ್ಲಾ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹನ್ನನ್ ಮೊಲ್ಲಾ ಅವರು ಲಕ್ನೋದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ರೈತ ಸಂಘಗಳ ಸಂಘಟನೆಯಾದ ಎಸ್‌ಕೆಎಂ ಕೂಡ ಡಿಸೆಂಬರ್ 8 ರಂದು ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲು ಸಭೆಯನ್ನು ಕರೆದಿದೆ.

“ಜನರ ಮಾತು ಕೇಳಲು ಸರ್ಕಾರ ಸಿದ್ಧವಿಲ್ಲದಿರುವುದನ್ನು ನಾವು ನೋಡಿದ್ದೇವೆ. ನಾವು ಮತ್ತೊಂದು ಚಳುವಳಿಯನ್ನು ಪ್ರಾರಂಭಿಸಿದ್ದೇವೆ. ಹೀಗಾಗಿ ನಾವು ದೇಶಾದ್ಯಂತ ರ್‍ಯಾಲಿಗಳನ್ನು ನಡೆಸುತ್ತೇವೆ. ಈ ಬಾರಿ ನಮ್ಮ ಚಳುವಳಿ ದೆಹಲಿಗೆ ಸೀಮಿತವಾಗಿ ಇರುವುದಿಲ್ಲ, ಇಡೀ ದೇಶಕ್ಕೆ ಸೀಮಿತವಾಗಿದೆ. ಆಯಾ ರಾಜ್ಯಗಳ ರಾಜಭವನ ಮತ್ತು ರಾಜ್ಯಪಾಲರ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿ ರೈತರು ಪಾದಯಾತ್ರೆ ನಡೆಸಲಿದ್ದಾರೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಚಳವಳಿಗಾರರು ಚುನಾವಣೆ ಗೆಲ್ಲಬೇಕಾದರೆ…

ಎಂಎಸ್‌ಪಿ ಕುರಿತು ಸಮಿತಿಯನ್ನು ಸರಿಯಾಗಿ ರಚಿಸಲಾಗಿಲ್ಲ ಹಾಗೂ ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ “ಸುಳ್ಳು” ಪ್ರಕರಣಗಳನ್ನು ಹಿಂಪಡೆಯಲಾಗಿಲ್ಲ ಎಂದು ರೈತ ಸಂಘ ಹೇಳಿಕೊಂಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ಮೋದಿ, ಎಂಎಸ್‌ಪಿ ಮೇಲಿನ ಕಾನೂನು ಖಾತರಿಗಾಗಿ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

“ಎಂಎಸ್‌ಪಿ ಕುರಿತ ಸರ್ಕಾರದ ಸಮಿತಿಯನ್ನು ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಮೋದಿ ಸರ್ಕಾರ ರದ್ದು ಮಾಡಿದ ಕೃಷಿ ಕಾನೂನುಗಳನ್ನು ಬೆಂಬಲಿಸಿದ ‘ತಥಾಕಥಿತ ರೈತ ನಾಯಕರು’ ಅದರ ಸದಸ್ಯರಾಗಿದ್ದಾರೆ. ರೈತರ ಕಾನೂನು ಹಕ್ಕುಗಳನ್ನು ಖಾತರಿಪಡಿಸುವ ಬಗ್ಗೆ ಮಾತನಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಈ ಮಧ್ಯೆ, ಎಸ್‌ಕೆಎಂ ಸದಸ್ಯ ಅಭಿಮನ್ಯು ಸಿಂಗ್ ಕೊಹರ್ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ, ಹೀಗಾಗಿ ಇನ್ನೊಂದು ಚಳವಳಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...