Homeರಾಷ್ಟ್ರೀಯಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

ಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರಾರಂಭಿಸಿದ ಐತಿಹಾಸಿಕ ಹೋರಾಟಕ್ಕೆ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ರೈತ ಸಂಘಗಳು ಶನಿವಾರ ದೇಶಾದ್ಯಂತ ರಾಜಭವನಗಳಿಗೆ ಮೆರವಣಿಗೆಗಳನ್ನು ನಡೆಸಲಿವೆ. ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಸಿದ ಸುಮಾರು ಒಂದು ವರ್ಷದ ದೀರ್ಘ ಹೋರಾಟದ ನಂತರ ಬಿಜೆಪಿ ಸರ್ಕಾರ ರೈತರ ಮುಂದೆ ಮಂಡಿಯೂರಿ ಸೋಲೊಪ್ಪಿಕೊಂಡಿತ್ತು.

ಸರ್ಕಾರ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸದ ಕಾರಣ ಅದರ ವಿರುದ್ಧ ಕೂಡಾ ರೈತರ ಪ್ರತಿಭಟನೆಯಲ್ಲಿ ದಾಖಲಿಸಲಾಗುವುದು ಎಂದು ರೈತ ಮುಖಂಡರು ಶುಕ್ರವಾರ ಹೇಳಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಚರ್ಚೆ ನಡೆಸಿ ಕಾನೂನು ತರುವುದಾಗಿ ಸರಕಾರ ಲಿಖಿತವಾಗಿ ಹೇಳಿಕೊಂಡಿದ್ದರೂ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ರೈತ ಮುಖಂಡರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೇಶದಾದ್ಯಂತದ ಲಕ್ಷಾಂತರ ರೈತರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

“ನಮ್ಮ ಹಲವು ಬೇಡಿಕೆಗಳಿಗೆ ಲಿಖಿತವಾಗಿ ಒಪ್ಪಿಗೆ ನೀಡಿದರೂ ಏನೂ ಆಗಿಲ್ಲ. ಇದು ದೇಶದ ರೈತರಿಗೆ ಮೋಸ ಮಾಡಿದ ದೇಶದ್ರೋಹಿ ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರವು ಕಾರ್ಪೊರೇಟ್‌ಗಳನ್ನು ರಕ್ಷಿಸುತ್ತಿದೆ… ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶವೇ ಇಲ್ಲ ಎಂದು ಸಾಬೀತುಪಡಿಸಿದ್ದಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಹನ್ನನ್ ಮೊಲ್ಲಾ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹನ್ನನ್ ಮೊಲ್ಲಾ ಅವರು ಲಕ್ನೋದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ರೈತ ಸಂಘಗಳ ಸಂಘಟನೆಯಾದ ಎಸ್‌ಕೆಎಂ ಕೂಡ ಡಿಸೆಂಬರ್ 8 ರಂದು ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲು ಸಭೆಯನ್ನು ಕರೆದಿದೆ.

“ಜನರ ಮಾತು ಕೇಳಲು ಸರ್ಕಾರ ಸಿದ್ಧವಿಲ್ಲದಿರುವುದನ್ನು ನಾವು ನೋಡಿದ್ದೇವೆ. ನಾವು ಮತ್ತೊಂದು ಚಳುವಳಿಯನ್ನು ಪ್ರಾರಂಭಿಸಿದ್ದೇವೆ. ಹೀಗಾಗಿ ನಾವು ದೇಶಾದ್ಯಂತ ರ್‍ಯಾಲಿಗಳನ್ನು ನಡೆಸುತ್ತೇವೆ. ಈ ಬಾರಿ ನಮ್ಮ ಚಳುವಳಿ ದೆಹಲಿಗೆ ಸೀಮಿತವಾಗಿ ಇರುವುದಿಲ್ಲ, ಇಡೀ ದೇಶಕ್ಕೆ ಸೀಮಿತವಾಗಿದೆ. ಆಯಾ ರಾಜ್ಯಗಳ ರಾಜಭವನ ಮತ್ತು ರಾಜ್ಯಪಾಲರ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿ ರೈತರು ಪಾದಯಾತ್ರೆ ನಡೆಸಲಿದ್ದಾರೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಚಳವಳಿಗಾರರು ಚುನಾವಣೆ ಗೆಲ್ಲಬೇಕಾದರೆ…

ಎಂಎಸ್‌ಪಿ ಕುರಿತು ಸಮಿತಿಯನ್ನು ಸರಿಯಾಗಿ ರಚಿಸಲಾಗಿಲ್ಲ ಹಾಗೂ ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ “ಸುಳ್ಳು” ಪ್ರಕರಣಗಳನ್ನು ಹಿಂಪಡೆಯಲಾಗಿಲ್ಲ ಎಂದು ರೈತ ಸಂಘ ಹೇಳಿಕೊಂಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ಮೋದಿ, ಎಂಎಸ್‌ಪಿ ಮೇಲಿನ ಕಾನೂನು ಖಾತರಿಗಾಗಿ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

“ಎಂಎಸ್‌ಪಿ ಕುರಿತ ಸರ್ಕಾರದ ಸಮಿತಿಯನ್ನು ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಮೋದಿ ಸರ್ಕಾರ ರದ್ದು ಮಾಡಿದ ಕೃಷಿ ಕಾನೂನುಗಳನ್ನು ಬೆಂಬಲಿಸಿದ ‘ತಥಾಕಥಿತ ರೈತ ನಾಯಕರು’ ಅದರ ಸದಸ್ಯರಾಗಿದ್ದಾರೆ. ರೈತರ ಕಾನೂನು ಹಕ್ಕುಗಳನ್ನು ಖಾತರಿಪಡಿಸುವ ಬಗ್ಗೆ ಮಾತನಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಈ ಮಧ್ಯೆ, ಎಸ್‌ಕೆಎಂ ಸದಸ್ಯ ಅಭಿಮನ್ಯು ಸಿಂಗ್ ಕೊಹರ್ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ, ಹೀಗಾಗಿ ಇನ್ನೊಂದು ಚಳವಳಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...