Homeರಾಷ್ಟ್ರೀಯಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

ಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರಾರಂಭಿಸಿದ ಐತಿಹಾಸಿಕ ಹೋರಾಟಕ್ಕೆ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ರೈತ ಸಂಘಗಳು ಶನಿವಾರ ದೇಶಾದ್ಯಂತ ರಾಜಭವನಗಳಿಗೆ ಮೆರವಣಿಗೆಗಳನ್ನು ನಡೆಸಲಿವೆ. ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಸಿದ ಸುಮಾರು ಒಂದು ವರ್ಷದ ದೀರ್ಘ ಹೋರಾಟದ ನಂತರ ಬಿಜೆಪಿ ಸರ್ಕಾರ ರೈತರ ಮುಂದೆ ಮಂಡಿಯೂರಿ ಸೋಲೊಪ್ಪಿಕೊಂಡಿತ್ತು.

ಸರ್ಕಾರ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸದ ಕಾರಣ ಅದರ ವಿರುದ್ಧ ಕೂಡಾ ರೈತರ ಪ್ರತಿಭಟನೆಯಲ್ಲಿ ದಾಖಲಿಸಲಾಗುವುದು ಎಂದು ರೈತ ಮುಖಂಡರು ಶುಕ್ರವಾರ ಹೇಳಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಚರ್ಚೆ ನಡೆಸಿ ಕಾನೂನು ತರುವುದಾಗಿ ಸರಕಾರ ಲಿಖಿತವಾಗಿ ಹೇಳಿಕೊಂಡಿದ್ದರೂ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ರೈತ ಮುಖಂಡರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೇಶದಾದ್ಯಂತದ ಲಕ್ಷಾಂತರ ರೈತರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

“ನಮ್ಮ ಹಲವು ಬೇಡಿಕೆಗಳಿಗೆ ಲಿಖಿತವಾಗಿ ಒಪ್ಪಿಗೆ ನೀಡಿದರೂ ಏನೂ ಆಗಿಲ್ಲ. ಇದು ದೇಶದ ರೈತರಿಗೆ ಮೋಸ ಮಾಡಿದ ದೇಶದ್ರೋಹಿ ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರವು ಕಾರ್ಪೊರೇಟ್‌ಗಳನ್ನು ರಕ್ಷಿಸುತ್ತಿದೆ… ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶವೇ ಇಲ್ಲ ಎಂದು ಸಾಬೀತುಪಡಿಸಿದ್ದಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಹನ್ನನ್ ಮೊಲ್ಲಾ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹನ್ನನ್ ಮೊಲ್ಲಾ ಅವರು ಲಕ್ನೋದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ರೈತ ಸಂಘಗಳ ಸಂಘಟನೆಯಾದ ಎಸ್‌ಕೆಎಂ ಕೂಡ ಡಿಸೆಂಬರ್ 8 ರಂದು ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲು ಸಭೆಯನ್ನು ಕರೆದಿದೆ.

“ಜನರ ಮಾತು ಕೇಳಲು ಸರ್ಕಾರ ಸಿದ್ಧವಿಲ್ಲದಿರುವುದನ್ನು ನಾವು ನೋಡಿದ್ದೇವೆ. ನಾವು ಮತ್ತೊಂದು ಚಳುವಳಿಯನ್ನು ಪ್ರಾರಂಭಿಸಿದ್ದೇವೆ. ಹೀಗಾಗಿ ನಾವು ದೇಶಾದ್ಯಂತ ರ್‍ಯಾಲಿಗಳನ್ನು ನಡೆಸುತ್ತೇವೆ. ಈ ಬಾರಿ ನಮ್ಮ ಚಳುವಳಿ ದೆಹಲಿಗೆ ಸೀಮಿತವಾಗಿ ಇರುವುದಿಲ್ಲ, ಇಡೀ ದೇಶಕ್ಕೆ ಸೀಮಿತವಾಗಿದೆ. ಆಯಾ ರಾಜ್ಯಗಳ ರಾಜಭವನ ಮತ್ತು ರಾಜ್ಯಪಾಲರ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿ ರೈತರು ಪಾದಯಾತ್ರೆ ನಡೆಸಲಿದ್ದಾರೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಚಳವಳಿಗಾರರು ಚುನಾವಣೆ ಗೆಲ್ಲಬೇಕಾದರೆ…

ಎಂಎಸ್‌ಪಿ ಕುರಿತು ಸಮಿತಿಯನ್ನು ಸರಿಯಾಗಿ ರಚಿಸಲಾಗಿಲ್ಲ ಹಾಗೂ ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ “ಸುಳ್ಳು” ಪ್ರಕರಣಗಳನ್ನು ಹಿಂಪಡೆಯಲಾಗಿಲ್ಲ ಎಂದು ರೈತ ಸಂಘ ಹೇಳಿಕೊಂಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ಮೋದಿ, ಎಂಎಸ್‌ಪಿ ಮೇಲಿನ ಕಾನೂನು ಖಾತರಿಗಾಗಿ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

“ಎಂಎಸ್‌ಪಿ ಕುರಿತ ಸರ್ಕಾರದ ಸಮಿತಿಯನ್ನು ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಮೋದಿ ಸರ್ಕಾರ ರದ್ದು ಮಾಡಿದ ಕೃಷಿ ಕಾನೂನುಗಳನ್ನು ಬೆಂಬಲಿಸಿದ ‘ತಥಾಕಥಿತ ರೈತ ನಾಯಕರು’ ಅದರ ಸದಸ್ಯರಾಗಿದ್ದಾರೆ. ರೈತರ ಕಾನೂನು ಹಕ್ಕುಗಳನ್ನು ಖಾತರಿಪಡಿಸುವ ಬಗ್ಗೆ ಮಾತನಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಈ ಮಧ್ಯೆ, ಎಸ್‌ಕೆಎಂ ಸದಸ್ಯ ಅಭಿಮನ್ಯು ಸಿಂಗ್ ಕೊಹರ್ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ, ಹೀಗಾಗಿ ಇನ್ನೊಂದು ಚಳವಳಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...