Homeರಾಷ್ಟ್ರೀಯಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

ಐತಿಹಾಸಿಕ ರೈತ ಹೋರಾಟ ಪ್ರಾರಂಭಿಸಿ 2 ವರ್ಷ: ರೈತ ಸಂಘಗಳಿಂದ ದೇಶದಾದ್ಯಂತ ರಾಜಭವನ ಚಲೋ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರಾರಂಭಿಸಿದ ಐತಿಹಾಸಿಕ ಹೋರಾಟಕ್ಕೆ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ರೈತ ಸಂಘಗಳು ಶನಿವಾರ ದೇಶಾದ್ಯಂತ ರಾಜಭವನಗಳಿಗೆ ಮೆರವಣಿಗೆಗಳನ್ನು ನಡೆಸಲಿವೆ. ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಸಿದ ಸುಮಾರು ಒಂದು ವರ್ಷದ ದೀರ್ಘ ಹೋರಾಟದ ನಂತರ ಬಿಜೆಪಿ ಸರ್ಕಾರ ರೈತರ ಮುಂದೆ ಮಂಡಿಯೂರಿ ಸೋಲೊಪ್ಪಿಕೊಂಡಿತ್ತು.

ಸರ್ಕಾರ ನೀಡಿದ್ದ ವಿವಿಧ ಭರವಸೆಗಳನ್ನು ಈಡೇರಿಸದ ಕಾರಣ ಅದರ ವಿರುದ್ಧ ಕೂಡಾ ರೈತರ ಪ್ರತಿಭಟನೆಯಲ್ಲಿ ದಾಖಲಿಸಲಾಗುವುದು ಎಂದು ರೈತ ಮುಖಂಡರು ಶುಕ್ರವಾರ ಹೇಳಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಚರ್ಚೆ ನಡೆಸಿ ಕಾನೂನು ತರುವುದಾಗಿ ಸರಕಾರ ಲಿಖಿತವಾಗಿ ಹೇಳಿಕೊಂಡಿದ್ದರೂ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ರೈತ ಮುಖಂಡರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಹಾಗೂ ದೇಶದಾದ್ಯಂತದ ಲಕ್ಷಾಂತರ ರೈತರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್‌ನಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

“ನಮ್ಮ ಹಲವು ಬೇಡಿಕೆಗಳಿಗೆ ಲಿಖಿತವಾಗಿ ಒಪ್ಪಿಗೆ ನೀಡಿದರೂ ಏನೂ ಆಗಿಲ್ಲ. ಇದು ದೇಶದ ರೈತರಿಗೆ ಮೋಸ ಮಾಡಿದ ದೇಶದ್ರೋಹಿ ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರವು ಕಾರ್ಪೊರೇಟ್‌ಗಳನ್ನು ರಕ್ಷಿಸುತ್ತಿದೆ… ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶವೇ ಇಲ್ಲ ಎಂದು ಸಾಬೀತುಪಡಿಸಿದ್ದಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಹನ್ನನ್ ಮೊಲ್ಲಾ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹನ್ನನ್ ಮೊಲ್ಲಾ ಅವರು ಲಕ್ನೋದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ರೈತ ಸಂಘಗಳ ಸಂಘಟನೆಯಾದ ಎಸ್‌ಕೆಎಂ ಕೂಡ ಡಿಸೆಂಬರ್ 8 ರಂದು ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲು ಸಭೆಯನ್ನು ಕರೆದಿದೆ.

“ಜನರ ಮಾತು ಕೇಳಲು ಸರ್ಕಾರ ಸಿದ್ಧವಿಲ್ಲದಿರುವುದನ್ನು ನಾವು ನೋಡಿದ್ದೇವೆ. ನಾವು ಮತ್ತೊಂದು ಚಳುವಳಿಯನ್ನು ಪ್ರಾರಂಭಿಸಿದ್ದೇವೆ. ಹೀಗಾಗಿ ನಾವು ದೇಶಾದ್ಯಂತ ರ್‍ಯಾಲಿಗಳನ್ನು ನಡೆಸುತ್ತೇವೆ. ಈ ಬಾರಿ ನಮ್ಮ ಚಳುವಳಿ ದೆಹಲಿಗೆ ಸೀಮಿತವಾಗಿ ಇರುವುದಿಲ್ಲ, ಇಡೀ ದೇಶಕ್ಕೆ ಸೀಮಿತವಾಗಿದೆ. ಆಯಾ ರಾಜ್ಯಗಳ ರಾಜಭವನ ಮತ್ತು ರಾಜ್ಯಪಾಲರ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿ ರೈತರು ಪಾದಯಾತ್ರೆ ನಡೆಸಲಿದ್ದಾರೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಚಳವಳಿಗಾರರು ಚುನಾವಣೆ ಗೆಲ್ಲಬೇಕಾದರೆ…

ಎಂಎಸ್‌ಪಿ ಕುರಿತು ಸಮಿತಿಯನ್ನು ಸರಿಯಾಗಿ ರಚಿಸಲಾಗಿಲ್ಲ ಹಾಗೂ ಆಂದೋಲನದ ಸಮಯದಲ್ಲಿ ರೈತರ ವಿರುದ್ಧ ದಾಖಲಿಸಲಾದ “ಸುಳ್ಳು” ಪ್ರಕರಣಗಳನ್ನು ಹಿಂಪಡೆಯಲಾಗಿಲ್ಲ ಎಂದು ರೈತ ಸಂಘ ಹೇಳಿಕೊಂಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ಮೋದಿ, ಎಂಎಸ್‌ಪಿ ಮೇಲಿನ ಕಾನೂನು ಖಾತರಿಗಾಗಿ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

“ಎಂಎಸ್‌ಪಿ ಕುರಿತ ಸರ್ಕಾರದ ಸಮಿತಿಯನ್ನು ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಮೋದಿ ಸರ್ಕಾರ ರದ್ದು ಮಾಡಿದ ಕೃಷಿ ಕಾನೂನುಗಳನ್ನು ಬೆಂಬಲಿಸಿದ ‘ತಥಾಕಥಿತ ರೈತ ನಾಯಕರು’ ಅದರ ಸದಸ್ಯರಾಗಿದ್ದಾರೆ. ರೈತರ ಕಾನೂನು ಹಕ್ಕುಗಳನ್ನು ಖಾತರಿಪಡಿಸುವ ಬಗ್ಗೆ ಮಾತನಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಈ ಮಧ್ಯೆ, ಎಸ್‌ಕೆಎಂ ಸದಸ್ಯ ಅಭಿಮನ್ಯು ಸಿಂಗ್ ಕೊಹರ್ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ, ಹೀಗಾಗಿ ಇನ್ನೊಂದು ಚಳವಳಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...