HomeಮುಖಪುಟJNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

JNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಪ್ರವೇಶ ರದ್ದುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಜೆಎನ್‌ಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸರಿಯಾದ ನಡವಳಿಕೆಯ 10-ಪುಟದ ನಿಯಮಗಳು ಪ್ರತಿಭಟನೆ ಮತ್ತು ಫೋರ್ಜರಿಯಂತಹ ವಿವಿಧ ಕೃತ್ಯಗಳಿಗೆ ಶಿಕ್ಷೆಯನ್ನು ಸೂಚಿಸುತ್ತವೆ.

ಡಾಕ್ಯುಮೆಂಟ್ ಪ್ರಕಾರ, ಈ ನಿಯಮಗಳು ಫೆಬ್ರವರಿ 3ರಂದು ಜಾರಿಗೆ ಬಂದವೆ. ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನದ ವಿಚಾರವಾಗಿ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆಗಳು ನಡೆದವು ಆ ಬಳಿಕ ಈ ನಿಯಮಗಳನ್ನು ಮಾಡಲಾಗಿದೆ. ಇದನ್ನು ಶಿಸ್ತು ಮತ್ತು ನಡವಳಿಕೆಯ ನಿಯಮಗಳು ಎಂದು ಕರೆಯಲಾಗಿದೆ. ಈ ನಿಯಮಗಳು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. 10 ಪುಟಗಳ ನಿಯಮದಲ್ಲಿ 17 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಿಶ್ವವಿದ್ಯಾನಿಲಯದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎಕ್ಸಿಕ್ಯೂಟಿವ್ ಕೌನ್ಸಿಲ್ ಈ ಹೊಸ ನಿಯಮಗಳನ್ನು ಅನುಮೋದಿಸಿದೆ ಎಂದು ನಿಯಮಗಳ ದಾಖಲೆ ಹೇಳುತ್ತದೆ.

ಈ ವಿಷಯವನ್ನು ಹೆಚ್ಚುವರಿ ಕಾರ್ಯಸೂಚಿಯಾಗಿ ತರಲಾಗಿದೆ ಮತ್ತು “ಕೋರ್ಟ್ ವಿಷಯಗಳಿಗಾಗಿ” ಈ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಲ್ಲೇಖಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರು ಪಿಟಿಐಗೆ ತಿಳಿಸಿದರು.

ಹೆಸರು ಹೇಳಲು ಇಚ್ಛಿಸದ ಕಾರ್ಯಕಾರಿ ಮಂಡಳಿಯ ಸದಸ್ಯರೊಬ್ಬರು, ”ಸಭೆಯಲ್ಲಿ ಈ ವಿಷಯವನ್ನು ಸುದೀರ್ಘವಾಗಿ ಚರ್ಚಿಸಲಾಗಿಲ್ಲ ಮತ್ತು ನ್ಯಾಯಾಲಯದ ವಿಷಯಗಳಿಗಾಗಿ ನಿಯಮಗಳನ್ನು ರಚಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಕಾರ್ಯಕಾರಿ ಮಂಡಳಿ ಸದಸ್ಯ ಬ್ರಹ್ಮ ಪ್ರಕಾಶ್ ಸಿಂಗ್ ಅವರು, ”ವಿಶ್ವವಿದ್ಯಾಲಯವು ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಸಂಪೂರ್ಣ ದಾಖಲೆಯನ್ನು ಸಿದ್ಧಪಡಿಸಲು ಯೋಜಿಸಿರಬಹುದು ಆದರೆ ಅದನ್ನು ಸಭೆಯಲ್ಲಿ ಸರಿಯಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.

ಎಬಿವಿಪಿಯ ಜೆಎನ್‌ಯು ಕಾರ್ಯದರ್ಶಿ ವಿಕಾಸ್ ಪಟೇಲ್, ”ಈ ಹೊಸ ಸರ್ವಾಧಿಕಾರಿ (‘ತುಗ್ಲಕಿ’) ನೀತಿ ಸಂಹಿತೆಯ ಅಗತ್ಯವಿಲ್ಲ, ಹಳೆಯ ನೀತಿ ಸಂಹಿತೆ ಸಾಕಷ್ಟು ಪರಿಣಾಮಕಾರಿಯಾಗಿದೆ. ಸುರಕ್ಷತಾ ಭದ್ರತೆ ಮತ್ತು ಸುವ್ಯವಸ್ಥೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಬದಲು, ಜೆಎನ್‌ಯು ನಿರ್ವಾಹಕರು ಯಾವುದೇ ಚರ್ಚೆಯಿಲ್ಲದೆ ಈ ಕಠಿಣ ನೀತಿ ಸಂಹಿತೆಯನ್ನು ಹೇರಿದ್ದಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಈ ನಿಯಮಗಳನ್ನು ಜಾರಿ ತರುವ ಮೊದಲು ಅಥವಾ ನಂತರ ಪ್ರವೇಶ ಪಡೆದ ಅರೆಕಾಲಿಕ ವಿದ್ಯಾರ್ಥಿಗಳು ಸೇರಿದಂತೆ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳು ಅನ್ವಯಿಸುತ್ತವೆ ಎಂದು ಡಾಕ್ಯುಮೆಂಟ್ ಹೇಳುತ್ತದೆ.

ನಿಯಮಗಳ ಪಟ್ಟಿಯಲ್ಲಿ, ತಡೆಗಟ್ಟುವಿಕೆ, ಜೂಜಾಟದಲ್ಲಿ ತೊಡಗುವುದು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ವಶಪಡಿಸಿಕೊಳ್ಳುವುದು, ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಕೆ ಮತ್ತು ಫೋರ್ಜರಿ ಮಾಡುವುದು ಸೇರಿದಂತೆ 17 “ಅಪರಾಧಗಳಿಗೆ” ಶಿಕ್ಷೆಗಳ ಬಗ್ಗೆ ತಿಳಿಸಲಾಗಿದೆ. ದೂರುಗಳ ಪ್ರತಿಯನ್ನು ಪೋಷಕರಿಗೆ ಕಳುಹಿಸಲಾಗುವುದು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಬ್ಬರನ್ನೂ ಒಳಗೊಂಡ ಪ್ರಕರಣಗಳನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ಕೇಂದ್ರ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಗೆ ತಿಳಿಸಬಹುದು. ಲೈಂಗಿಕ ಕಿರುಕುಳ, ರ್ಯಾಗಿಂಗ್ ಹಾಗೂ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಶಿಸ್ತುಪಾಲನಾ ಕಚೇರಿಯ ವ್ಯಾಪ್ತಿಗೆ ಬರಲಿವೆ.

”ಕಾನೂನುಗಳಲ್ಲಿ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಶಿಸ್ತುಪಾಲನಾ ವಿಚಾರಣೆಯ ನಂತರ ಹೊಸ ನಿಯಮಗಳನ್ನು ರೂಪಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಶಿಸ್ತುಪಾಲನಾಧಿಕಾರಿ ರಜನೀಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ. ಈ ಶಿಸ್ತುಪಾಲನಾ ವಿಚಾರಣೆ ಯಾವಾಗ ಪ್ರಾರಂಭವಾಯಿತು ಎಂದು ಅವರು ಬಹಿರಂಗಪಡಿಸಲಿಲ್ಲ.

ಘೆರಾವ್ ಹಾಕುವುದು, ಪ್ರತಿಭಟನೆಗೆ ಕೂರುವುದು ಶೈಕ್ಷಣಿಕ ಮತ್ತು ಶಿಸ್ತುಪಾಲನಾ ಕಾರ್ಯಚಟುವಟಿಕೆಯನ್ನು ಅಡ್ಡಿಪಡಿಸುವ ಅಥವಾ ಹಿಂಸಾಚಾರಕ್ಕೆ ಪ್ರಚೋದಿಸುವ ಯಾವುದೇ ಕ್ರಿಯೆಯಂತಹ ಎಲ್ಲಾ ಹಿಂಸಾಚಾರ ಮತ್ತು ದಬ್ಬಾಳಿಕೆಗೆ ಶಿಕ್ಷೆಗಳನ್ನು ಹೊಸ ನಿಯಮಗಳು ಒಳಗೊಂಡಿವೆ.

ಶಿಕ್ಷೆಗಳಲ್ಲಿ “ಪ್ರವೇಶವನ್ನು ರದ್ದುಗೊಳಿಸುವುದು ಅಥವಾ ಪದವಿಯನ್ನು ಹಿಂಪಡೆಯುವುದು ಅಥವಾ ನಿಗದಿತ ಅವಧಿಗೆ ನೋಂದಣಿ ನಿರಾಕರಣೆ, ನಾಲ್ಕು ಸೆಮಿಸ್ಟರ್‌ಗಳವರೆಗೆ, ಅಥವಾ ಸಂಪೂರ್ಣ JNU ಕ್ಯಾಂಪಸ್‌ನಿಂದ ಹೊರಹಾಕುವಿಕೆ, 30,000 ರೂ.ವರೆಗೆ ದಂಡ. ಹಳೆಯ ನಿಯಮಗಳ ಪ್ರಕಾರ, ಒಂದು/ಎರಡು ಸೆಮಿಸ್ಟರ್‌ಗಳ ಕಾಲ ಹಾಸ್ಟೆಲ್‌ನಿಂದ ಹೊರಹಾಕುವಿಕುವುದನ್ನು ಒಳಗೊಂಡಿದೆ.

ವಿಷಯವು ನ್ಯಾಯವಾಗಿದ್ದರೆ ನ್ಯಾಯಾಲಯದ ಆದೇಶ ಮತ್ತು ನಿರ್ದೇಶನದಂತೆ ಮುಖ್ಯ ಶಿಸ್ತುಪಾಲನಾ ಕಚೇರಿಯು ಕ್ರಮ ಕೈಗೊಳ್ಳುತ್ತದೆ ಎಂದು ನಿಯಮಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...