HomeಮುಖಪುಟJNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

JNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಪ್ರವೇಶ ರದ್ದುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಜೆಎನ್‌ಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸರಿಯಾದ ನಡವಳಿಕೆಯ 10-ಪುಟದ ನಿಯಮಗಳು ಪ್ರತಿಭಟನೆ ಮತ್ತು ಫೋರ್ಜರಿಯಂತಹ ವಿವಿಧ ಕೃತ್ಯಗಳಿಗೆ ಶಿಕ್ಷೆಯನ್ನು ಸೂಚಿಸುತ್ತವೆ.

ಡಾಕ್ಯುಮೆಂಟ್ ಪ್ರಕಾರ, ಈ ನಿಯಮಗಳು ಫೆಬ್ರವರಿ 3ರಂದು ಜಾರಿಗೆ ಬಂದವೆ. ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನದ ವಿಚಾರವಾಗಿ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆಗಳು ನಡೆದವು ಆ ಬಳಿಕ ಈ ನಿಯಮಗಳನ್ನು ಮಾಡಲಾಗಿದೆ. ಇದನ್ನು ಶಿಸ್ತು ಮತ್ತು ನಡವಳಿಕೆಯ ನಿಯಮಗಳು ಎಂದು ಕರೆಯಲಾಗಿದೆ. ಈ ನಿಯಮಗಳು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. 10 ಪುಟಗಳ ನಿಯಮದಲ್ಲಿ 17 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಿಶ್ವವಿದ್ಯಾನಿಲಯದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎಕ್ಸಿಕ್ಯೂಟಿವ್ ಕೌನ್ಸಿಲ್ ಈ ಹೊಸ ನಿಯಮಗಳನ್ನು ಅನುಮೋದಿಸಿದೆ ಎಂದು ನಿಯಮಗಳ ದಾಖಲೆ ಹೇಳುತ್ತದೆ.

ಈ ವಿಷಯವನ್ನು ಹೆಚ್ಚುವರಿ ಕಾರ್ಯಸೂಚಿಯಾಗಿ ತರಲಾಗಿದೆ ಮತ್ತು “ಕೋರ್ಟ್ ವಿಷಯಗಳಿಗಾಗಿ” ಈ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಲ್ಲೇಖಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರು ಪಿಟಿಐಗೆ ತಿಳಿಸಿದರು.

ಹೆಸರು ಹೇಳಲು ಇಚ್ಛಿಸದ ಕಾರ್ಯಕಾರಿ ಮಂಡಳಿಯ ಸದಸ್ಯರೊಬ್ಬರು, ”ಸಭೆಯಲ್ಲಿ ಈ ವಿಷಯವನ್ನು ಸುದೀರ್ಘವಾಗಿ ಚರ್ಚಿಸಲಾಗಿಲ್ಲ ಮತ್ತು ನ್ಯಾಯಾಲಯದ ವಿಷಯಗಳಿಗಾಗಿ ನಿಯಮಗಳನ್ನು ರಚಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಕಾರ್ಯಕಾರಿ ಮಂಡಳಿ ಸದಸ್ಯ ಬ್ರಹ್ಮ ಪ್ರಕಾಶ್ ಸಿಂಗ್ ಅವರು, ”ವಿಶ್ವವಿದ್ಯಾಲಯವು ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಸಂಪೂರ್ಣ ದಾಖಲೆಯನ್ನು ಸಿದ್ಧಪಡಿಸಲು ಯೋಜಿಸಿರಬಹುದು ಆದರೆ ಅದನ್ನು ಸಭೆಯಲ್ಲಿ ಸರಿಯಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.

ಎಬಿವಿಪಿಯ ಜೆಎನ್‌ಯು ಕಾರ್ಯದರ್ಶಿ ವಿಕಾಸ್ ಪಟೇಲ್, ”ಈ ಹೊಸ ಸರ್ವಾಧಿಕಾರಿ (‘ತುಗ್ಲಕಿ’) ನೀತಿ ಸಂಹಿತೆಯ ಅಗತ್ಯವಿಲ್ಲ, ಹಳೆಯ ನೀತಿ ಸಂಹಿತೆ ಸಾಕಷ್ಟು ಪರಿಣಾಮಕಾರಿಯಾಗಿದೆ. ಸುರಕ್ಷತಾ ಭದ್ರತೆ ಮತ್ತು ಸುವ್ಯವಸ್ಥೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಬದಲು, ಜೆಎನ್‌ಯು ನಿರ್ವಾಹಕರು ಯಾವುದೇ ಚರ್ಚೆಯಿಲ್ಲದೆ ಈ ಕಠಿಣ ನೀತಿ ಸಂಹಿತೆಯನ್ನು ಹೇರಿದ್ದಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಈ ನಿಯಮಗಳನ್ನು ಜಾರಿ ತರುವ ಮೊದಲು ಅಥವಾ ನಂತರ ಪ್ರವೇಶ ಪಡೆದ ಅರೆಕಾಲಿಕ ವಿದ್ಯಾರ್ಥಿಗಳು ಸೇರಿದಂತೆ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳು ಅನ್ವಯಿಸುತ್ತವೆ ಎಂದು ಡಾಕ್ಯುಮೆಂಟ್ ಹೇಳುತ್ತದೆ.

ನಿಯಮಗಳ ಪಟ್ಟಿಯಲ್ಲಿ, ತಡೆಗಟ್ಟುವಿಕೆ, ಜೂಜಾಟದಲ್ಲಿ ತೊಡಗುವುದು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ವಶಪಡಿಸಿಕೊಳ್ಳುವುದು, ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಕೆ ಮತ್ತು ಫೋರ್ಜರಿ ಮಾಡುವುದು ಸೇರಿದಂತೆ 17 “ಅಪರಾಧಗಳಿಗೆ” ಶಿಕ್ಷೆಗಳ ಬಗ್ಗೆ ತಿಳಿಸಲಾಗಿದೆ. ದೂರುಗಳ ಪ್ರತಿಯನ್ನು ಪೋಷಕರಿಗೆ ಕಳುಹಿಸಲಾಗುವುದು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಬ್ಬರನ್ನೂ ಒಳಗೊಂಡ ಪ್ರಕರಣಗಳನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ಕೇಂದ್ರ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಗೆ ತಿಳಿಸಬಹುದು. ಲೈಂಗಿಕ ಕಿರುಕುಳ, ರ್ಯಾಗಿಂಗ್ ಹಾಗೂ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಶಿಸ್ತುಪಾಲನಾ ಕಚೇರಿಯ ವ್ಯಾಪ್ತಿಗೆ ಬರಲಿವೆ.

”ಕಾನೂನುಗಳಲ್ಲಿ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಶಿಸ್ತುಪಾಲನಾ ವಿಚಾರಣೆಯ ನಂತರ ಹೊಸ ನಿಯಮಗಳನ್ನು ರೂಪಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಶಿಸ್ತುಪಾಲನಾಧಿಕಾರಿ ರಜನೀಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ. ಈ ಶಿಸ್ತುಪಾಲನಾ ವಿಚಾರಣೆ ಯಾವಾಗ ಪ್ರಾರಂಭವಾಯಿತು ಎಂದು ಅವರು ಬಹಿರಂಗಪಡಿಸಲಿಲ್ಲ.

ಘೆರಾವ್ ಹಾಕುವುದು, ಪ್ರತಿಭಟನೆಗೆ ಕೂರುವುದು ಶೈಕ್ಷಣಿಕ ಮತ್ತು ಶಿಸ್ತುಪಾಲನಾ ಕಾರ್ಯಚಟುವಟಿಕೆಯನ್ನು ಅಡ್ಡಿಪಡಿಸುವ ಅಥವಾ ಹಿಂಸಾಚಾರಕ್ಕೆ ಪ್ರಚೋದಿಸುವ ಯಾವುದೇ ಕ್ರಿಯೆಯಂತಹ ಎಲ್ಲಾ ಹಿಂಸಾಚಾರ ಮತ್ತು ದಬ್ಬಾಳಿಕೆಗೆ ಶಿಕ್ಷೆಗಳನ್ನು ಹೊಸ ನಿಯಮಗಳು ಒಳಗೊಂಡಿವೆ.

ಶಿಕ್ಷೆಗಳಲ್ಲಿ “ಪ್ರವೇಶವನ್ನು ರದ್ದುಗೊಳಿಸುವುದು ಅಥವಾ ಪದವಿಯನ್ನು ಹಿಂಪಡೆಯುವುದು ಅಥವಾ ನಿಗದಿತ ಅವಧಿಗೆ ನೋಂದಣಿ ನಿರಾಕರಣೆ, ನಾಲ್ಕು ಸೆಮಿಸ್ಟರ್‌ಗಳವರೆಗೆ, ಅಥವಾ ಸಂಪೂರ್ಣ JNU ಕ್ಯಾಂಪಸ್‌ನಿಂದ ಹೊರಹಾಕುವಿಕೆ, 30,000 ರೂ.ವರೆಗೆ ದಂಡ. ಹಳೆಯ ನಿಯಮಗಳ ಪ್ರಕಾರ, ಒಂದು/ಎರಡು ಸೆಮಿಸ್ಟರ್‌ಗಳ ಕಾಲ ಹಾಸ್ಟೆಲ್‌ನಿಂದ ಹೊರಹಾಕುವಿಕುವುದನ್ನು ಒಳಗೊಂಡಿದೆ.

ವಿಷಯವು ನ್ಯಾಯವಾಗಿದ್ದರೆ ನ್ಯಾಯಾಲಯದ ಆದೇಶ ಮತ್ತು ನಿರ್ದೇಶನದಂತೆ ಮುಖ್ಯ ಶಿಸ್ತುಪಾಲನಾ ಕಚೇರಿಯು ಕ್ರಮ ಕೈಗೊಳ್ಳುತ್ತದೆ ಎಂದು ನಿಯಮಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...