Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...