Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...