Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...