Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...