Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...