Homeಕರ್ನಾಟಕ9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

- Advertisement -
- Advertisement -

ರಾಜ್ಯದ ಬೆಳಗಾವಿ ಜಿಲ್ಲೆಗೆ ಬಂಧಿತ ಕಾರ್ಮಿಕರಾಗಿ ಕರೆತರಲಾದ ಆದಿವಾಸಿ ಸಮುದಾಯಗಳ 20 ವಲಸೆ ಕಾರ್ಮಿಕರಲ್ಲಿ ಒಂಬತ್ತು ಮಕ್ಕಳು ಕೂಡಾ ಇದ್ದಾರೆ ಎಂದು, ವಿವಿಧ ನಾಗರಿಕ ಹಕ್ಕು ಸಂಸ್ಥೆಗಳ ನಾಲ್ಕು ಸದಸ್ಯರ ಸಮಿತಿಯು ಸತ್ಯಶೋಧನಾ ವರದಿಯು ಹೇಳಿದೆ.

ವರದಿಯ ಪ್ರಕಾರ, ಮಧ್ಯಪ್ರದೇಶದ ಆದಿವಾಸಿ ಸಮುದಾಯಗಳಿಗೆ ಸೇರಿದ 20 ಕಾರ್ಮಿಕರನ್ನು ಬೆಳಗಾವಿಯ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ರಾಜ್ಯಕ್ಕೆ ಕರೆತರಲಾಗಿತ್ತು.

ಗುತ್ತಿಗೆದಾರರು ಕಾರ್ಮಿಕರನ್ನು ಕರೆತರುವಾಗ ಪ್ರತಿ ವ್ಯಕ್ತಿಗೆ 20,000 ರೂ.ಗಳನ್ನು ಮುಂಗಡವಾಗಿ ನೀಡಿದ್ದರು. ಈ ಹಣವನ್ನು ಕಾರ್ಮಿಕರು ದುಡಿದು ಮರುಪಾವತಿಸಬೇಕಾಗಿತ್ತು. ಗುತ್ತಿಗೆದಾರರು ಕಾರ್ಮಿಕರಿಗೆ ಹೆಚ್ಚಿನ ವೇತನ ಮತ್ತು ಮೂರು ತಿಂಗಳೊಳಗೆ ಊರಿಗೆ ಹಿಂದಿರುಗಬಹುದು ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಆದರೆ ಕೂಲಿ ಕಾರ್ಮಿಕರಿಗೆ ಅವರು ದುಡಿಯುತ್ತಿರುವ ಜಮೀನಿನ ರೈತರು ನಿತ್ಯ 25ರಿಂದ 30 ರೂ.ವರೆಗೆ ಕೂಲಿ ಮಾತ್ರ ನೀಡುತ್ತಿದ್ದು, ಕಾರ್ಮಿಕರನ್ನು ಕರೆದುಕೊಂಡು ಬಂದ ಗುತ್ತಿಗೆದಾರ ಯಾವುದೆ ಹಣ ನೀಡಿಲ್ಲ. ಇದರ ಮೇಲೆಯೂ, ಕಾರ್ಮಿಕರು ಎರಡೂವರೆ ತಿಂಗಳಿನಿಂದ ಸಂಬಳವಿಲ್ಲದೆ ದುಡಿದಿದ್ದಾರೆ. ನಂತರ ಗುತ್ತಿಗೆದಾರರಲ್ಲಿ ಕೂಲಿ ವಿಚಾರಿಸಿದಾಗ 2 ಲಕ್ಷ ರೂ. ಸಾಲದ ಬಗ್ಗೆ ಹೇಳಿದ್ದು, ಈ ಸಾಲ ಮನ್ನಾ ಮಾಡಿದ ನಂತರವೇ ತೆರಳಬಹುದು ಎಂದು ತಿಳಿಸಿದ್ದರು ಎಂದು ವರದಿ ಹೇಳಿದೆ.

“ಬೆಳಗಾವಿಗೆ ಕರೆತರುವ ಮೊದಲು, ಕಾರ್ಮಿಕರಿಗೆ ಪಾವತಿಸಬೇಕಾದ ವೇತನದ ದರ, ಮರುಪಾವತಿಯ ವಿವರಗಳು ಅಥವಾ ಅವರಿಗೆ ನೀಡಿದ ಮುಂಗಡ ಹಣದ ಬಡ್ಡಿಯ ಮಾಹಿತಿಯ ಬಗ್ಗೆ ತಿಳಿಸಲಾಗಿಲ್ಲ ಎಂದು ಕಾರ್ಮಿಕರು ಹೇಳಿದ್ದಾರೆ” ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಒಂಬತ್ತು ಮಕ್ಕಳು ಸೇರಿದಂತೆ ಕಾರ್ಮಿಕರನ್ನು ದಿನಕ್ಕೆ 15 ಗಂಟೆಗಳ ಕಾಲ ದುಡಿಯುವಂತೆ ಮಾಡಲಾಗುತ್ತಿತ್ತು ಮತ್ತು ಹೊಲದ ಬಳಿಯ ಟಾರ್ಪಾಲಿನ್ ಗುಡಿಸಲುಗಳಲ್ಲಿ ವಾಸಿಸುವಂತೆ ಮಾಡಲಾಗಿತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳದಲ್ಲಿ ಬಾಲ ಕಾರ್ಮಿಕರು ಇಲ್ಲ ಮತ್ತು ಕಾರ್ಮಿಕರನ್ನು ಬಂಧನದಲ್ಲಿ ಇಡಲಾಗಿಲ್ಲ ಎಂದು ವರದಿ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಸತ್ಯಶೋದನಾ ಸಮಿತಿಯ ವರದಿ ಆರೋಪಿಸಿದೆ.

ಸತ್ಯಶೋಧನಾ ವರದಿಯನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ, ಅಖಿಲ ಭಾರತ ನ್ಯಾಯವಾದಿಗಳ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಕ್ಕೆ ಸೇರಿದ ನಾಲ್ವರು ಸದಸ್ಯರು ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆ; 26 ಕಾರ್ಮಿಕರು ಆಸ್ಪತ್ರೆಗೆ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...