Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...