Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...