Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...