Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...