Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...