Homeಮುಖಪುಟ20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

- Advertisement -
- Advertisement -

ರಾಜ್ಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಶಾಸಕರ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಲೋಕಾಯುಕ್ತ ರೈಡ್‌ ಬೆನ್ನಲ್ಲೇ ಸುಮಾರು 20 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ ಬಂದಿದೆ.

ಶಾಸಕ ಮಾಡಾಳು ಕೆ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಅವರೊಂದಿಗೇ ಅರೋಮಾ ಕಂಪನಿಯ ಸಿಬ್ಬಂದಿಯಾದ ಆಲ್ಬರ್ಟ್ ನಿಕೋಲಾ ಮತ್ತು ಗಂಗಾಧರ ಎಂಬುವರು ಬಂಧನಕ್ಕೊಳಗಾಗಿರುವುದು ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ.

ಅರೋಮಾ ಕಂಪನಿ ಮತ್ತು ಇದರ ಸೋದರ ಸಂಸ್ಥೆಯ ಕಂಪನಿಯಿಂದ ಸೋಪ್ ನೂಡಲ್ಸ್ ಖರೀದಿಯಲ್ಲಿ 20 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣ ಈ ಹಿಂದೆ ಬೆಳಕಿಗೆ ಬಂದಿತ್ತು. ಆದರೆ ಸೂಕ್ತ ತನಿಖೆ ನಡೆಯದೆ ಮುಚ್ಚಿ ಹೋಗಿತ್ತು ಎಂದಿರುವ ‘ದಿ ಫೈಲ್‌’ ವರದಿ, “ಪ್ರಶಾಂತ್ ಮಾಡಾಳುವಿನೊಂದಿಗೇ ಅರೋಮಾ ಕಂಪನಿಯ ಇಬ್ಬರು ಸಿಬ್ಬಂದಿಯನ್ನೂ ಬಂಧನವೂ ಈಗ ಆಗಿರುವುದರಿಂದ 20 ಕೋಟಿ ರೂ. ಅವ್ಯವಹಾರ ಆರೋಪ ಪ್ರಕರಣಕ್ಕೆ ಮರುಜೀವ ಸಿಕ್ಕಿದೆ” ಎಂದಿದೆ.

ರೈಡ್‌ ವೇಳೆ ಅರೋಮಾ ಕಂಪನಿಯ ಸಿಬ್ಬಂದಿಯ ಬಳಿ ಒಟ್ಟು 90 ಲಕ್ಷ ರೂ. (ಪ್ರಶಾಂತ್‌ಗೆ ನೀಡಲು ತಂದಿದ್ದ ಹಣ) ಇತ್ತೆಂದು ಲೋಕಾಯುಕ್ತ ಮೂಲಗಳು ಹೇಳುತ್ತಿರುವುದಾಗಿ ವರದಿ ಬಹಿರಂಗಪಡಿಸಿದೆ. ಈ ಸಿಬ್ಬಂದಿಯ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

ಏನಿದು 20 ಕೋಟಿ ರೂ. ಹಗರಣ?

“ಕರ್ನಾಟಕ ಕೆಮಿಕಲ್ ಮತ್ತು ಕರ್ನಾಟಕ ಅರೋಮಾ ಕಂಪನಿ ಸೋದರ ಸಂಸ್ಥೆಗಳಾಗಿವೆ. ಇವೆರಡೂ ಒಂದೇ ವಿಳಾಸದಲ್ಲಿ ಕೆಲಸ ಮಾಡುತ್ತಿವೆ. ಇಂತಹ ಸಂಸ್ಥೆಗಳಿಗೆ ಆರ್ಥಿಕ ಬಿಡ್‌ನಲ್ಲಿ ಅವಕಾಶ ನೀಡಿ ಕೆಟಿಪಿಪಿ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಕೆಎಸ್‌ಡಿಎಲ್ ನೌಕರರ ಸಂಘವು ದೂರು ನೀಡಿತ್ತು. ಆದರೆ ತನಿಖೆ ಸಮರ್ಪಕವಾಗಿ ಆಗಿರಲಿಲ್ಲ. ಪ್ರತಿಷ್ಟಿತ ಕಂಪನಿಗಳನ್ನು ಕಡೆಗಣಿಸಿ ಸೋಪ್ ನೂಡಲ್ಸ್ ಸರಬರಾಜು ಮಾಡಿದ ಅನುಭವವೇ ಇಲ್ಲದ ಕರ್ನಾಟಕ ಕೆಮಿಕಲ್ಸ್ ಕಂಪನಿಯ ಬಿಡ್‌ಅನ್ನು ಅನುಮೋದಿಸಲಾಗಿತ್ತು” ಎಂದು ‘ದಿ ಫೈಲ್‌’ ತನಿಖಾ ವರದಿ ಬಯಲಿಗೆಳೆದಿತ್ತು.

ಪಾನ್ ಸೆಂಚುರಿ, ಬಿರ್ಲಾ ಕಂಪನಿ, ಮಲೇಶಿಯಾ, ಕೆಎಲ್‌ಕೆ ಪಾಲೋಸಾ, ಇಜೀಲ್ ಕೆಮಿಕಲ್ಸ್ ಪ್ರೈವೈಟ್ ಲಿಮಿಟೆಡ್ ಚೆನ್ನೈ, ಕರನೀತ್ ಎಂಟರ್‌ಪ್ರೈಸೆಸ್‌ ಇಂಡಿಯಾ ಪ್ರೈವೈಟ್ ಲಿಮಿಟೆಡ್, ಬೆಂಗಳೂರು ಬಿರ್ಲಾ ಲಿಮಿಟೆಡ್, ಮಲೇಷಿಯಾ ಕಂಪನಿ 3ಎಫ್ ಇಂಡಸ್ಟ್ರೀಸ್ ಇಂಡಿಯಾ ಸೇರಿದಂತೆ ಹಲವು ಕಂಪನಿಗಳು ನೂಡಲ್ಸ್‌ನ್ನು ಕೇವಲ 55ರಿಂದ 60 ಸಾವಿರ ರು.ಗೆ ಮಾರಾಟ ಮಾಡುತ್ತಿದ್ದವು. ಆದರೆ ಕೆಎಸ್‌ಡಿಎಲ್‌ನ ಭ್ರಷ್ಟ ಅಧಿಕಾರಿಗಳು ಕರ್ನಾಟಕ ಕೆಮಿಕಲ್ಸ್ ಕಂಪನಿಯಿಂದ ಖರೀದಿಸಿ ಕಂಪನಿಯ ಬೊಕ್ಕಸಕ್ಕೆ ನಷ್ಟಕ್ಕೆ ಕಾರಣರಾಗಿದ್ದರು ಎಂಬ ಆರೋಪ ಬಂದಿತ್ತು. ನಿಖೆ ನಡೆಸಿದ್ದ ಹಿರಿಯ ಐಎಎಸ್‌ ಅಧಿಕಾರಿ ಗುಂಜನ್ ಕೃಷ್ಣ ಅವರು ಮೈಸೂ‌ರು ಸ್ಯಾಂಡಲ್ ಸೋಪ್ ಕಾರ್ಖಾನೆಯ ಆರೋಪಿತ ಅಧಿಕಾರಿಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವರದಿ ನೀಡಿದ್ದರು. ಆದರೀಗ ಲೋಕಾಯುಕ್ತ ರೈಡ್‌ನಲ್ಲಿ ಅರೋಮ ಕಂಪನಿಯ ಹೆಸರು ಥಳುಕು ಹಾಕಿಕೊಂಡಿರುವುದರಿಂದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ.

ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನಿಜವಾದ ಕಾರಣವೇನು?

ಪುತ್ರನ ಕಚೇರಿ ಹಾಗೂ ಮನೆಯ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್‌ (ಕರ್ನಾಟಕ ಸಾಬೂನು ಮತ್ತು ಮಾರ್ಜಕ) ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕನ ಪುತ್ರ ದಾಳಿಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಸಹಜವಾಗಿ ಸರ್ಕಾರಕ್ಕೆ ಇದು ಮುಜುಗರ ತಂದೊಡ್ಡಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕಜಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರವನ್ನು ಮಾಡಾಳ್ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ, 2.03.2023ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮಾಡಾಳ್ ತಿಳಿಸಿದ್ದಾರೆ. ಆದರೆ ಹಳೆಯ ಪ್ರಕರಣ ಮುನ್ನೆಲೆಗೆ ಬರುತ್ತಿರುವುದರಿಂದ ಹಲವು ಅನುಮಾನಗಳಿಗೆ ಆಸ್ಪದ ನೀಡಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...