Homeಮುಖಪುಟ20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

- Advertisement -
- Advertisement -

ರಾಜ್ಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಶಾಸಕರ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಲೋಕಾಯುಕ್ತ ರೈಡ್‌ ಬೆನ್ನಲ್ಲೇ ಸುಮಾರು 20 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ ಬಂದಿದೆ.

ಶಾಸಕ ಮಾಡಾಳು ಕೆ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಅವರೊಂದಿಗೇ ಅರೋಮಾ ಕಂಪನಿಯ ಸಿಬ್ಬಂದಿಯಾದ ಆಲ್ಬರ್ಟ್ ನಿಕೋಲಾ ಮತ್ತು ಗಂಗಾಧರ ಎಂಬುವರು ಬಂಧನಕ್ಕೊಳಗಾಗಿರುವುದು ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ.

ಅರೋಮಾ ಕಂಪನಿ ಮತ್ತು ಇದರ ಸೋದರ ಸಂಸ್ಥೆಯ ಕಂಪನಿಯಿಂದ ಸೋಪ್ ನೂಡಲ್ಸ್ ಖರೀದಿಯಲ್ಲಿ 20 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣ ಈ ಹಿಂದೆ ಬೆಳಕಿಗೆ ಬಂದಿತ್ತು. ಆದರೆ ಸೂಕ್ತ ತನಿಖೆ ನಡೆಯದೆ ಮುಚ್ಚಿ ಹೋಗಿತ್ತು ಎಂದಿರುವ ‘ದಿ ಫೈಲ್‌’ ವರದಿ, “ಪ್ರಶಾಂತ್ ಮಾಡಾಳುವಿನೊಂದಿಗೇ ಅರೋಮಾ ಕಂಪನಿಯ ಇಬ್ಬರು ಸಿಬ್ಬಂದಿಯನ್ನೂ ಬಂಧನವೂ ಈಗ ಆಗಿರುವುದರಿಂದ 20 ಕೋಟಿ ರೂ. ಅವ್ಯವಹಾರ ಆರೋಪ ಪ್ರಕರಣಕ್ಕೆ ಮರುಜೀವ ಸಿಕ್ಕಿದೆ” ಎಂದಿದೆ.

ರೈಡ್‌ ವೇಳೆ ಅರೋಮಾ ಕಂಪನಿಯ ಸಿಬ್ಬಂದಿಯ ಬಳಿ ಒಟ್ಟು 90 ಲಕ್ಷ ರೂ. (ಪ್ರಶಾಂತ್‌ಗೆ ನೀಡಲು ತಂದಿದ್ದ ಹಣ) ಇತ್ತೆಂದು ಲೋಕಾಯುಕ್ತ ಮೂಲಗಳು ಹೇಳುತ್ತಿರುವುದಾಗಿ ವರದಿ ಬಹಿರಂಗಪಡಿಸಿದೆ. ಈ ಸಿಬ್ಬಂದಿಯ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

ಏನಿದು 20 ಕೋಟಿ ರೂ. ಹಗರಣ?

“ಕರ್ನಾಟಕ ಕೆಮಿಕಲ್ ಮತ್ತು ಕರ್ನಾಟಕ ಅರೋಮಾ ಕಂಪನಿ ಸೋದರ ಸಂಸ್ಥೆಗಳಾಗಿವೆ. ಇವೆರಡೂ ಒಂದೇ ವಿಳಾಸದಲ್ಲಿ ಕೆಲಸ ಮಾಡುತ್ತಿವೆ. ಇಂತಹ ಸಂಸ್ಥೆಗಳಿಗೆ ಆರ್ಥಿಕ ಬಿಡ್‌ನಲ್ಲಿ ಅವಕಾಶ ನೀಡಿ ಕೆಟಿಪಿಪಿ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಕೆಎಸ್‌ಡಿಎಲ್ ನೌಕರರ ಸಂಘವು ದೂರು ನೀಡಿತ್ತು. ಆದರೆ ತನಿಖೆ ಸಮರ್ಪಕವಾಗಿ ಆಗಿರಲಿಲ್ಲ. ಪ್ರತಿಷ್ಟಿತ ಕಂಪನಿಗಳನ್ನು ಕಡೆಗಣಿಸಿ ಸೋಪ್ ನೂಡಲ್ಸ್ ಸರಬರಾಜು ಮಾಡಿದ ಅನುಭವವೇ ಇಲ್ಲದ ಕರ್ನಾಟಕ ಕೆಮಿಕಲ್ಸ್ ಕಂಪನಿಯ ಬಿಡ್‌ಅನ್ನು ಅನುಮೋದಿಸಲಾಗಿತ್ತು” ಎಂದು ‘ದಿ ಫೈಲ್‌’ ತನಿಖಾ ವರದಿ ಬಯಲಿಗೆಳೆದಿತ್ತು.

ಪಾನ್ ಸೆಂಚುರಿ, ಬಿರ್ಲಾ ಕಂಪನಿ, ಮಲೇಶಿಯಾ, ಕೆಎಲ್‌ಕೆ ಪಾಲೋಸಾ, ಇಜೀಲ್ ಕೆಮಿಕಲ್ಸ್ ಪ್ರೈವೈಟ್ ಲಿಮಿಟೆಡ್ ಚೆನ್ನೈ, ಕರನೀತ್ ಎಂಟರ್‌ಪ್ರೈಸೆಸ್‌ ಇಂಡಿಯಾ ಪ್ರೈವೈಟ್ ಲಿಮಿಟೆಡ್, ಬೆಂಗಳೂರು ಬಿರ್ಲಾ ಲಿಮಿಟೆಡ್, ಮಲೇಷಿಯಾ ಕಂಪನಿ 3ಎಫ್ ಇಂಡಸ್ಟ್ರೀಸ್ ಇಂಡಿಯಾ ಸೇರಿದಂತೆ ಹಲವು ಕಂಪನಿಗಳು ನೂಡಲ್ಸ್‌ನ್ನು ಕೇವಲ 55ರಿಂದ 60 ಸಾವಿರ ರು.ಗೆ ಮಾರಾಟ ಮಾಡುತ್ತಿದ್ದವು. ಆದರೆ ಕೆಎಸ್‌ಡಿಎಲ್‌ನ ಭ್ರಷ್ಟ ಅಧಿಕಾರಿಗಳು ಕರ್ನಾಟಕ ಕೆಮಿಕಲ್ಸ್ ಕಂಪನಿಯಿಂದ ಖರೀದಿಸಿ ಕಂಪನಿಯ ಬೊಕ್ಕಸಕ್ಕೆ ನಷ್ಟಕ್ಕೆ ಕಾರಣರಾಗಿದ್ದರು ಎಂಬ ಆರೋಪ ಬಂದಿತ್ತು. ನಿಖೆ ನಡೆಸಿದ್ದ ಹಿರಿಯ ಐಎಎಸ್‌ ಅಧಿಕಾರಿ ಗುಂಜನ್ ಕೃಷ್ಣ ಅವರು ಮೈಸೂ‌ರು ಸ್ಯಾಂಡಲ್ ಸೋಪ್ ಕಾರ್ಖಾನೆಯ ಆರೋಪಿತ ಅಧಿಕಾರಿಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವರದಿ ನೀಡಿದ್ದರು. ಆದರೀಗ ಲೋಕಾಯುಕ್ತ ರೈಡ್‌ನಲ್ಲಿ ಅರೋಮ ಕಂಪನಿಯ ಹೆಸರು ಥಳುಕು ಹಾಕಿಕೊಂಡಿರುವುದರಿಂದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ.

ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನಿಜವಾದ ಕಾರಣವೇನು?

ಪುತ್ರನ ಕಚೇರಿ ಹಾಗೂ ಮನೆಯ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್‌ (ಕರ್ನಾಟಕ ಸಾಬೂನು ಮತ್ತು ಮಾರ್ಜಕ) ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕನ ಪುತ್ರ ದಾಳಿಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಸಹಜವಾಗಿ ಸರ್ಕಾರಕ್ಕೆ ಇದು ಮುಜುಗರ ತಂದೊಡ್ಡಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕಜಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರವನ್ನು ಮಾಡಾಳ್ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ, 2.03.2023ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮಾಡಾಳ್ ತಿಳಿಸಿದ್ದಾರೆ. ಆದರೆ ಹಳೆಯ ಪ್ರಕರಣ ಮುನ್ನೆಲೆಗೆ ಬರುತ್ತಿರುವುದರಿಂದ ಹಲವು ಅನುಮಾನಗಳಿಗೆ ಆಸ್ಪದ ನೀಡಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....