Homeಕ್ರೀಡೆಕ್ರಿಕೆಟ್2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

- Advertisement -
- Advertisement -

2022ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯು ಹಲವು ರೋಚಕ ಪಂದ್ಯಗಳಿಗೆ ಸಾಕ್ಷಿಯಾಯಿತು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಎನಿಸಿತು. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದರೂ ಸೆಮಿಫೈನಲ್‌ನಲ್ಲಿ ಎಡವಿದ ಭಾರತ ತಂಡ ಕಪ್ ಬರ ನೀಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾರತ ತಂಡ ಮುಂದಿನ ಟಿ20 ವಿಶ್ವಕಪ್ ನತ್ತ ದೃಷ್ಟಿ ಹಾಯಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ 2024ರ ಆವೃತ್ತಿಯಲ್ಲಿ 12 ತಂಡಗಳ ಬದಲಿಗೆ 20 ತಂಡಗಳಿಗೆ ಅವಕಾಶ ನೀಡಲು ಮತ್ತು ಟೂರ್ನಿಯ ಫಾರ್ಮ್ಯಾಟ್‌ನಲ್ಲಿ ಬದಲಾವಣೆ ತರಲು ಐಸಿಸಿ ನಿರ್ಧರಿಸಿದೆ. ಸದ್ಯಕ್ಕೆ ಲೀಗ್ ಹಂತದಲ್ಲಿ ತಲಾ ಆರು ತಂಡಗಳಿರುವ ಎರಡು ಗುಂಪುಗಳ ಅಗ್ರ ಮೊದಲ ಮತ್ತು ದ್ವೀತಿಯ ಸ್ಥಾನ ಪಡೆದ ನಾಲ್ಕು ತಂಡಗಳನ್ನು ಸೆಮಿಫೈನಲ್‌ಗೆ ಕಳಿಸಲಾಗುತ್ತಿತ್ತು. ಆದರೆ ಹಲವು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಐಸಿಸಿ ಹೊಸ ಫಾರ್ಮ್ಯಾಟ್‌ ಘೋಷಿಸಿದೆ.

ಈಗಾಗಲೇ ಅರ್ಹತೆ ಪಡೆದ ತಂಡಗಳು

ಮುಂದಿನ ಟಿ20 ವಿಶ್ವಕಪ್‌ನಲ್ಲಿ ಸೆಣಸಲಿರುವ 20 ತಂಡಗಳ ಪೈಕಿ 12 ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು 2022ರ ಟೂರ್ನಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಅರ್ಹತೆ ಪಡೆದಿವೆ. ಆತಿಥ್ಯ ವಹಿಸುವ ಕಾರಣಕಕಾಗಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ತಂಡಗಳು ಅರ್ಹತೆ ಪಡೆದರೆ, ಐಸಿಸಿಯ ಉತ್ತಮ ರ್ಯಾಂಕಿಂಗ್ ಆಧಾರದಲ್ಲಿ ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸಹ ಅರ್ಹತೆ ಗಿಟ್ಟಿಸಿವೆ.

ಅರ್ಹತೆ ಪಡೆಯಬೇಕಿರುವ ತಂಡಗಳು

ಉಳಿದ 8 ತಂಡಗಳನ್ನು ಪ್ರಾದೇಶಿಕ ಕ್ವಾಲಿಫೈಯರ್ ಪಂದ್ಯಗಳ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ, ಆಫ್ರಿಕಾ ಮತ್ತು ಯೂರೋಪ್ ಖಂಡದಿಂದ ತಲಾ ಎರಡು ದೇಶಗಳು ಅರ್ಹತೆ ಪಡೆದರೆ ಅಮೆರಿಕ ಮತ್ತು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಿಂದ ತಲಾ ಒಂದು ತಂಡವು ಅರ್ಹತೆ ಪಡೆಯಲಿದೆ.

ಟೂರ್ನಿಯ ವಿಧಾನ (ಫಾರ್ಮ್ಯಾಟ್)

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ಲೀಗ್ ಹಂತದಲ್ಲಿ ತಲಾ 5 ತಂಡಗಳಿರುವ ನಾಲ್ಕು ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ಎದುರು ಸೆಣಸಬೇಕಿರುತ್ತದೆ. ಆನಂತರ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ 8  ತಂಡಗಳು (ಪ್ರತಿ ಗುಂಪಿನಿಂದ 2) ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ ಉಳಿದ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 8 ಹಂತ

ಈ ಹಂತದಲ್ಲಿ 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿಯೂ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ತಮ್ಮ ಎದುರಾಳಿ ತಂಡಗಳ ವಿರುದ್ದ ತಲಾ 3 ಪಂದ್ಯಗಳನ್ನು ಆಡುತ್ತವೆ. ಇಲ್ಲಿ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತವೆ.

2021ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 5 ಪಂದ್ಯಗಳಲ್ಲಿ ನಾಲ್ಕು ಗೆದ್ದರೂ ಸಹ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ಕ್ಕೆ5 ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ಸೋಲಿನೊಂದಿಗೆ ನಿರ್ಗಮಿಸಿತ್ತು. 2022ರ ಟೂರ್ನಿಯಲ್ಲಿಯೂ ಸಹ ಲೀಗ್ ಹಂತದಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೂ ಸಹ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿತ್ತು. ಹಾಗಾಗಿ ವಿಶ್ವಕಪ್ ಫಾರ್ಮ್ಯಾಟ್ ಬಗ್ಗೆ ದೂರುಗಳು ಕೇಳಿಬಂದಿದ್ದವು. ಹಾಗಾಗಿ ಐಸಿಸಿ ಹೊಸ ಫಾರ್ಮ್ಯಾಟ್‌ಗೆ ಬದಲಾವಣೆ ಮಾಡಿಕೊಂಡಿದೆ.

ಇದನ್ನೂ ಓದಿ:  ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...

ಮೋದಿ, ಶಾ ವಿರುದ್ಧ ಘೋಷಣೆ ಆರೋಪ: ತನ್ನದೇ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಮನವಿ ಮಾಡಿದ ಜೆಎನ್‌ಯು ಆಡಳಿತ ಮಂಡಳಿ

ಸೋಮವಾರ ರಾತ್ರಿ ವಿದ್ಯಾರ್ಥಿಗಳ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಆ ಘೋಷಣೆಗಳು "ಪ್ರಚೋದನಕಾರಿ, ಪ್ರಚೋದನಕಾರಿ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...