Homeಕ್ರೀಡೆಕ್ರಿಕೆಟ್2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

- Advertisement -
- Advertisement -

2022ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯು ಹಲವು ರೋಚಕ ಪಂದ್ಯಗಳಿಗೆ ಸಾಕ್ಷಿಯಾಯಿತು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಎನಿಸಿತು. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದರೂ ಸೆಮಿಫೈನಲ್‌ನಲ್ಲಿ ಎಡವಿದ ಭಾರತ ತಂಡ ಕಪ್ ಬರ ನೀಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾರತ ತಂಡ ಮುಂದಿನ ಟಿ20 ವಿಶ್ವಕಪ್ ನತ್ತ ದೃಷ್ಟಿ ಹಾಯಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ 2024ರ ಆವೃತ್ತಿಯಲ್ಲಿ 12 ತಂಡಗಳ ಬದಲಿಗೆ 20 ತಂಡಗಳಿಗೆ ಅವಕಾಶ ನೀಡಲು ಮತ್ತು ಟೂರ್ನಿಯ ಫಾರ್ಮ್ಯಾಟ್‌ನಲ್ಲಿ ಬದಲಾವಣೆ ತರಲು ಐಸಿಸಿ ನಿರ್ಧರಿಸಿದೆ. ಸದ್ಯಕ್ಕೆ ಲೀಗ್ ಹಂತದಲ್ಲಿ ತಲಾ ಆರು ತಂಡಗಳಿರುವ ಎರಡು ಗುಂಪುಗಳ ಅಗ್ರ ಮೊದಲ ಮತ್ತು ದ್ವೀತಿಯ ಸ್ಥಾನ ಪಡೆದ ನಾಲ್ಕು ತಂಡಗಳನ್ನು ಸೆಮಿಫೈನಲ್‌ಗೆ ಕಳಿಸಲಾಗುತ್ತಿತ್ತು. ಆದರೆ ಹಲವು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಐಸಿಸಿ ಹೊಸ ಫಾರ್ಮ್ಯಾಟ್‌ ಘೋಷಿಸಿದೆ.

ಈಗಾಗಲೇ ಅರ್ಹತೆ ಪಡೆದ ತಂಡಗಳು

ಮುಂದಿನ ಟಿ20 ವಿಶ್ವಕಪ್‌ನಲ್ಲಿ ಸೆಣಸಲಿರುವ 20 ತಂಡಗಳ ಪೈಕಿ 12 ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು 2022ರ ಟೂರ್ನಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಅರ್ಹತೆ ಪಡೆದಿವೆ. ಆತಿಥ್ಯ ವಹಿಸುವ ಕಾರಣಕಕಾಗಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ತಂಡಗಳು ಅರ್ಹತೆ ಪಡೆದರೆ, ಐಸಿಸಿಯ ಉತ್ತಮ ರ್ಯಾಂಕಿಂಗ್ ಆಧಾರದಲ್ಲಿ ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸಹ ಅರ್ಹತೆ ಗಿಟ್ಟಿಸಿವೆ.

ಅರ್ಹತೆ ಪಡೆಯಬೇಕಿರುವ ತಂಡಗಳು

ಉಳಿದ 8 ತಂಡಗಳನ್ನು ಪ್ರಾದೇಶಿಕ ಕ್ವಾಲಿಫೈಯರ್ ಪಂದ್ಯಗಳ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ, ಆಫ್ರಿಕಾ ಮತ್ತು ಯೂರೋಪ್ ಖಂಡದಿಂದ ತಲಾ ಎರಡು ದೇಶಗಳು ಅರ್ಹತೆ ಪಡೆದರೆ ಅಮೆರಿಕ ಮತ್ತು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಿಂದ ತಲಾ ಒಂದು ತಂಡವು ಅರ್ಹತೆ ಪಡೆಯಲಿದೆ.

ಟೂರ್ನಿಯ ವಿಧಾನ (ಫಾರ್ಮ್ಯಾಟ್)

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ಲೀಗ್ ಹಂತದಲ್ಲಿ ತಲಾ 5 ತಂಡಗಳಿರುವ ನಾಲ್ಕು ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ಎದುರು ಸೆಣಸಬೇಕಿರುತ್ತದೆ. ಆನಂತರ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ 8  ತಂಡಗಳು (ಪ್ರತಿ ಗುಂಪಿನಿಂದ 2) ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ ಉಳಿದ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 8 ಹಂತ

ಈ ಹಂತದಲ್ಲಿ 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿಯೂ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ತಮ್ಮ ಎದುರಾಳಿ ತಂಡಗಳ ವಿರುದ್ದ ತಲಾ 3 ಪಂದ್ಯಗಳನ್ನು ಆಡುತ್ತವೆ. ಇಲ್ಲಿ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತವೆ.

2021ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 5 ಪಂದ್ಯಗಳಲ್ಲಿ ನಾಲ್ಕು ಗೆದ್ದರೂ ಸಹ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ಕ್ಕೆ5 ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ಸೋಲಿನೊಂದಿಗೆ ನಿರ್ಗಮಿಸಿತ್ತು. 2022ರ ಟೂರ್ನಿಯಲ್ಲಿಯೂ ಸಹ ಲೀಗ್ ಹಂತದಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೂ ಸಹ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿತ್ತು. ಹಾಗಾಗಿ ವಿಶ್ವಕಪ್ ಫಾರ್ಮ್ಯಾಟ್ ಬಗ್ಗೆ ದೂರುಗಳು ಕೇಳಿಬಂದಿದ್ದವು. ಹಾಗಾಗಿ ಐಸಿಸಿ ಹೊಸ ಫಾರ್ಮ್ಯಾಟ್‌ಗೆ ಬದಲಾವಣೆ ಮಾಡಿಕೊಂಡಿದೆ.

ಇದನ್ನೂ ಓದಿ:  ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....