Homeಕ್ರೀಡೆಕ್ರಿಕೆಟ್2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

- Advertisement -
- Advertisement -

2022ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯು ಹಲವು ರೋಚಕ ಪಂದ್ಯಗಳಿಗೆ ಸಾಕ್ಷಿಯಾಯಿತು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಎನಿಸಿತು. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದರೂ ಸೆಮಿಫೈನಲ್‌ನಲ್ಲಿ ಎಡವಿದ ಭಾರತ ತಂಡ ಕಪ್ ಬರ ನೀಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾರತ ತಂಡ ಮುಂದಿನ ಟಿ20 ವಿಶ್ವಕಪ್ ನತ್ತ ದೃಷ್ಟಿ ಹಾಯಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ 2024ರ ಆವೃತ್ತಿಯಲ್ಲಿ 12 ತಂಡಗಳ ಬದಲಿಗೆ 20 ತಂಡಗಳಿಗೆ ಅವಕಾಶ ನೀಡಲು ಮತ್ತು ಟೂರ್ನಿಯ ಫಾರ್ಮ್ಯಾಟ್‌ನಲ್ಲಿ ಬದಲಾವಣೆ ತರಲು ಐಸಿಸಿ ನಿರ್ಧರಿಸಿದೆ. ಸದ್ಯಕ್ಕೆ ಲೀಗ್ ಹಂತದಲ್ಲಿ ತಲಾ ಆರು ತಂಡಗಳಿರುವ ಎರಡು ಗುಂಪುಗಳ ಅಗ್ರ ಮೊದಲ ಮತ್ತು ದ್ವೀತಿಯ ಸ್ಥಾನ ಪಡೆದ ನಾಲ್ಕು ತಂಡಗಳನ್ನು ಸೆಮಿಫೈನಲ್‌ಗೆ ಕಳಿಸಲಾಗುತ್ತಿತ್ತು. ಆದರೆ ಹಲವು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಐಸಿಸಿ ಹೊಸ ಫಾರ್ಮ್ಯಾಟ್‌ ಘೋಷಿಸಿದೆ.

ಈಗಾಗಲೇ ಅರ್ಹತೆ ಪಡೆದ ತಂಡಗಳು

ಮುಂದಿನ ಟಿ20 ವಿಶ್ವಕಪ್‌ನಲ್ಲಿ ಸೆಣಸಲಿರುವ 20 ತಂಡಗಳ ಪೈಕಿ 12 ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು 2022ರ ಟೂರ್ನಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಅರ್ಹತೆ ಪಡೆದಿವೆ. ಆತಿಥ್ಯ ವಹಿಸುವ ಕಾರಣಕಕಾಗಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ತಂಡಗಳು ಅರ್ಹತೆ ಪಡೆದರೆ, ಐಸಿಸಿಯ ಉತ್ತಮ ರ್ಯಾಂಕಿಂಗ್ ಆಧಾರದಲ್ಲಿ ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸಹ ಅರ್ಹತೆ ಗಿಟ್ಟಿಸಿವೆ.

ಅರ್ಹತೆ ಪಡೆಯಬೇಕಿರುವ ತಂಡಗಳು

ಉಳಿದ 8 ತಂಡಗಳನ್ನು ಪ್ರಾದೇಶಿಕ ಕ್ವಾಲಿಫೈಯರ್ ಪಂದ್ಯಗಳ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ, ಆಫ್ರಿಕಾ ಮತ್ತು ಯೂರೋಪ್ ಖಂಡದಿಂದ ತಲಾ ಎರಡು ದೇಶಗಳು ಅರ್ಹತೆ ಪಡೆದರೆ ಅಮೆರಿಕ ಮತ್ತು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಿಂದ ತಲಾ ಒಂದು ತಂಡವು ಅರ್ಹತೆ ಪಡೆಯಲಿದೆ.

ಟೂರ್ನಿಯ ವಿಧಾನ (ಫಾರ್ಮ್ಯಾಟ್)

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ಲೀಗ್ ಹಂತದಲ್ಲಿ ತಲಾ 5 ತಂಡಗಳಿರುವ ನಾಲ್ಕು ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ಎದುರು ಸೆಣಸಬೇಕಿರುತ್ತದೆ. ಆನಂತರ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ 8  ತಂಡಗಳು (ಪ್ರತಿ ಗುಂಪಿನಿಂದ 2) ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ ಉಳಿದ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 8 ಹಂತ

ಈ ಹಂತದಲ್ಲಿ 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿಯೂ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ತಮ್ಮ ಎದುರಾಳಿ ತಂಡಗಳ ವಿರುದ್ದ ತಲಾ 3 ಪಂದ್ಯಗಳನ್ನು ಆಡುತ್ತವೆ. ಇಲ್ಲಿ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತವೆ.

2021ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 5 ಪಂದ್ಯಗಳಲ್ಲಿ ನಾಲ್ಕು ಗೆದ್ದರೂ ಸಹ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ಕ್ಕೆ5 ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ಸೋಲಿನೊಂದಿಗೆ ನಿರ್ಗಮಿಸಿತ್ತು. 2022ರ ಟೂರ್ನಿಯಲ್ಲಿಯೂ ಸಹ ಲೀಗ್ ಹಂತದಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೂ ಸಹ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿತ್ತು. ಹಾಗಾಗಿ ವಿಶ್ವಕಪ್ ಫಾರ್ಮ್ಯಾಟ್ ಬಗ್ಗೆ ದೂರುಗಳು ಕೇಳಿಬಂದಿದ್ದವು. ಹಾಗಾಗಿ ಐಸಿಸಿ ಹೊಸ ಫಾರ್ಮ್ಯಾಟ್‌ಗೆ ಬದಲಾವಣೆ ಮಾಡಿಕೊಂಡಿದೆ.

ಇದನ್ನೂ ಓದಿ:  ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....