Homeಕ್ರೀಡೆಕ್ರಿಕೆಟ್2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

- Advertisement -
- Advertisement -

2022ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯು ಹಲವು ರೋಚಕ ಪಂದ್ಯಗಳಿಗೆ ಸಾಕ್ಷಿಯಾಯಿತು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಎನಿಸಿತು. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದರೂ ಸೆಮಿಫೈನಲ್‌ನಲ್ಲಿ ಎಡವಿದ ಭಾರತ ತಂಡ ಕಪ್ ಬರ ನೀಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾರತ ತಂಡ ಮುಂದಿನ ಟಿ20 ವಿಶ್ವಕಪ್ ನತ್ತ ದೃಷ್ಟಿ ಹಾಯಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ 2024ರ ಆವೃತ್ತಿಯಲ್ಲಿ 12 ತಂಡಗಳ ಬದಲಿಗೆ 20 ತಂಡಗಳಿಗೆ ಅವಕಾಶ ನೀಡಲು ಮತ್ತು ಟೂರ್ನಿಯ ಫಾರ್ಮ್ಯಾಟ್‌ನಲ್ಲಿ ಬದಲಾವಣೆ ತರಲು ಐಸಿಸಿ ನಿರ್ಧರಿಸಿದೆ. ಸದ್ಯಕ್ಕೆ ಲೀಗ್ ಹಂತದಲ್ಲಿ ತಲಾ ಆರು ತಂಡಗಳಿರುವ ಎರಡು ಗುಂಪುಗಳ ಅಗ್ರ ಮೊದಲ ಮತ್ತು ದ್ವೀತಿಯ ಸ್ಥಾನ ಪಡೆದ ನಾಲ್ಕು ತಂಡಗಳನ್ನು ಸೆಮಿಫೈನಲ್‌ಗೆ ಕಳಿಸಲಾಗುತ್ತಿತ್ತು. ಆದರೆ ಹಲವು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಐಸಿಸಿ ಹೊಸ ಫಾರ್ಮ್ಯಾಟ್‌ ಘೋಷಿಸಿದೆ.

ಈಗಾಗಲೇ ಅರ್ಹತೆ ಪಡೆದ ತಂಡಗಳು

ಮುಂದಿನ ಟಿ20 ವಿಶ್ವಕಪ್‌ನಲ್ಲಿ ಸೆಣಸಲಿರುವ 20 ತಂಡಗಳ ಪೈಕಿ 12 ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು 2022ರ ಟೂರ್ನಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಅರ್ಹತೆ ಪಡೆದಿವೆ. ಆತಿಥ್ಯ ವಹಿಸುವ ಕಾರಣಕಕಾಗಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ತಂಡಗಳು ಅರ್ಹತೆ ಪಡೆದರೆ, ಐಸಿಸಿಯ ಉತ್ತಮ ರ್ಯಾಂಕಿಂಗ್ ಆಧಾರದಲ್ಲಿ ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸಹ ಅರ್ಹತೆ ಗಿಟ್ಟಿಸಿವೆ.

ಅರ್ಹತೆ ಪಡೆಯಬೇಕಿರುವ ತಂಡಗಳು

ಉಳಿದ 8 ತಂಡಗಳನ್ನು ಪ್ರಾದೇಶಿಕ ಕ್ವಾಲಿಫೈಯರ್ ಪಂದ್ಯಗಳ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ, ಆಫ್ರಿಕಾ ಮತ್ತು ಯೂರೋಪ್ ಖಂಡದಿಂದ ತಲಾ ಎರಡು ದೇಶಗಳು ಅರ್ಹತೆ ಪಡೆದರೆ ಅಮೆರಿಕ ಮತ್ತು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಿಂದ ತಲಾ ಒಂದು ತಂಡವು ಅರ್ಹತೆ ಪಡೆಯಲಿದೆ.

ಟೂರ್ನಿಯ ವಿಧಾನ (ಫಾರ್ಮ್ಯಾಟ್)

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ಲೀಗ್ ಹಂತದಲ್ಲಿ ತಲಾ 5 ತಂಡಗಳಿರುವ ನಾಲ್ಕು ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ಎದುರು ಸೆಣಸಬೇಕಿರುತ್ತದೆ. ಆನಂತರ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ 8  ತಂಡಗಳು (ಪ್ರತಿ ಗುಂಪಿನಿಂದ 2) ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ ಉಳಿದ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 8 ಹಂತ

ಈ ಹಂತದಲ್ಲಿ 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿಯೂ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ತಮ್ಮ ಎದುರಾಳಿ ತಂಡಗಳ ವಿರುದ್ದ ತಲಾ 3 ಪಂದ್ಯಗಳನ್ನು ಆಡುತ್ತವೆ. ಇಲ್ಲಿ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತವೆ.

2021ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 5 ಪಂದ್ಯಗಳಲ್ಲಿ ನಾಲ್ಕು ಗೆದ್ದರೂ ಸಹ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ಕ್ಕೆ5 ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ಸೋಲಿನೊಂದಿಗೆ ನಿರ್ಗಮಿಸಿತ್ತು. 2022ರ ಟೂರ್ನಿಯಲ್ಲಿಯೂ ಸಹ ಲೀಗ್ ಹಂತದಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೂ ಸಹ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿತ್ತು. ಹಾಗಾಗಿ ವಿಶ್ವಕಪ್ ಫಾರ್ಮ್ಯಾಟ್ ಬಗ್ಗೆ ದೂರುಗಳು ಕೇಳಿಬಂದಿದ್ದವು. ಹಾಗಾಗಿ ಐಸಿಸಿ ಹೊಸ ಫಾರ್ಮ್ಯಾಟ್‌ಗೆ ಬದಲಾವಣೆ ಮಾಡಿಕೊಂಡಿದೆ.

ಇದನ್ನೂ ಓದಿ:  ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....